ಬೆಂಗಳೂರು: ಕುಲಪತಿ ನೇಮಕಾತಿ ವಿಚಾರದಲ್ಲಿ ತಾವು ಹೇಳಿದ್ದೇ ನಡೆಯಬೇಕು ಎನ್ನುವ ಹಾಗೆ ರಾಜ್ಯಾಪಾಲರು ನಡೆದುಕೊಳ್ಳುತ್ತಿದ್ದಾರೆ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಕ ವಿಚಾರದಲ್ಲಿ ಸಿಎಂಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಅವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ ಅವರು, ಸದನ ಅಂಗೀಕರಿಸಿದ ಮಸೂದೆಗೆ ಕಿಮ್ಮತ್ತು ಇಲ್ಲವೇ ಎಂದು ಪ್ರಶ್ನಿಸಿದರು.
ಕುಲಪತಿ ನೇಮಕಾತಿ ವಿಚಾರದಲ್ಲಿ ಮುಕ್ತ ಅವಕಾಶಕ್ಕಾಗಿ ನಾವು ಮಸೂದೆ ಮಂಡಿಸಿ, ಎರಡೂ ಸದನಗಳಲ್ಲಿ ಅಂಗೀಕರಿಸಿದ್ದೇವೆ. ಆದರೆ, ರಾಜ್ಯಪಾಲರಿಗೆ ಇಷ್ಟ ಆಗಿಲ್ಲ ಎಂದಾದರೆ ನಾವೇನು ಮಾಡಲು ಆಗುತ್ತದೆ ಎಂದರು.
ಮಸೂದೆಗಳನ್ನ ಮಂಡಿಸಿ ಅಂಗೀಕರಿಸಲು ವಿಧಾನಸಭೆಯೇ ಸುಪ್ರೀಂ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಆದರೂ, ರಾಜ್ಯಾಪಾಲರು ಒಪ್ಪದೇ ಇರುವುದು ದುರದೃಷ್ಟಕರ ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…