ರಾಜ್ಯ

ಪ್ರಧಾನಿ ಮೋದಿರವರ ಜನಪರ ಆಡಳಿತದಿಂದ ಚುನಾವಣೆಯಲ್ಲಿ ಗೆಲುವು: ಗೋವಿಂದ ಕಾರಜೋಳ

ವಿಜಯಪುರ: ಪ್ರಧಾನಿ ಮೋದಿ ಅವರ ಜನಪರ ಆಡಳಿತದಿಂದಾಗಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಜಯಪುರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ ಮೂಲಕ ಬಡ ಜನರ ವೋಟುಗಳಿಸಿ, ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರಿಗೆ ದೆಹಲಿ ಮತದಾರರು ಮತಗಳನ್ನು ನೀಡದೆ ಹೀನಾಯ ಸೋಲು ಉಣ್ಣಿಸಿದ್ದಾರೆ ಎಂದು ಕಿಡಿಕಾರಿದರು.

ಅರವಿಂದ ಕೇಜ್ರಿವಾಲ್‌ ಅವರ ನೇತೃತ್ವದ ಎಎಪಿ ಪಕ್ಷ ದೆಹಲಿಯಲ್ಲಿ ದುರಾಡಳಿತ ನಡೆಸಿದ್ದರು. ಅಲ್ಲದೇ ಅವರು ಮುಖ್ಯಮಂತ್ರಿಯಾಗಿದ್ದ ಜೈಲಿಗೆ ಹೋದರೂ ಲಜ್ಜೆಗೆಟ್ಟು ಆಡಳಿತ ನಡೆಸಿದ್ದ ಸಂವಿಧಾನ ದ್ರೋಹಿಯಾಗಿದ್ದಾರೆ. ದೆಹಲಿ ಒಂದು ಬೃಹತ್‌ ಮಹಾನಗರ ಪಾಲಿಕೆ ಆಡಳಿತ ಇದ್ದಂತೆ. ಬೇರೆ ರಾಜ್ಯಗಳಿಗೆ ಇರುವಂತೆ ಅಧಿಕ ಜವಾಬ್ದಾರಿ ಇಲ್ಲದಿರುವ ಸರ್ಕಾರವಾಗಿತ್ತು. ಇನ್ನೂ ಅತೀ ಹೆಚ್ಚು ಆದಾಯ ಸಂಗ್ರಹವಾಗುವ ಸ್ಥಳವಾಗಿದ್ದು, ಸರ್ಕಾರದ ಖಜಾನೆಯನ್ನು ಲೂಟಿ ಹೊಡೆದ ದೇಶ ಕಂಡ ಹೀನಮನಸ್ಸಿನ ರಾಜಕಾರಣಿಯಾಗಿದ್ದರು ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ದೇಶದಲ್ಲಿ ಎಎಪಿ ಪಕ್ಷದವರು ಕೆಟ್ಟ ಚುನಾವಣಾ ಮಾದರಿಯನ್ನು ಹಾಕಿ, ಉಚಿತ ಯೋಜನೆಗಳ ಮೂಲಕ ದೆಹಲಿ ಮತ್ತು ಪಂಜಾಬ್‌ನಲ್ಲಿ ಗೆಲುವು ಸಾಧಿಸಿದ್ದರು. ಆದರೆ ಇಂದು ಪ್ರಧಾನಿ ಮೋದಿಯವರ ಜನಾಡಳಿತವನ್ನು ಒಪ್ಪಿ ಜನರು ತಮ್ಮ ಮತಗಳನ್ನು ಬಿಜೆಪಿಗೆ ನೀಡಿದ್ದಾರೆ. ಹೀಗಾಗಿ ಚುನಾವಣೆ ಗೆಲುವಿಗೆ ಕಾರಣವಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

1 hour ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

1 hour ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

1 hour ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

2 hours ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

2 hours ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

3 hours ago