ರಾಜ್ಯ

ಪ್ರಧಾನಿ ಮೋದಿರವರ ಜನಪರ ಆಡಳಿತದಿಂದ ಚುನಾವಣೆಯಲ್ಲಿ ಗೆಲುವು: ಗೋವಿಂದ ಕಾರಜೋಳ

ವಿಜಯಪುರ: ಪ್ರಧಾನಿ ಮೋದಿ ಅವರ ಜನಪರ ಆಡಳಿತದಿಂದಾಗಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಜಯಪುರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ ಮೂಲಕ ಬಡ ಜನರ ವೋಟುಗಳಿಸಿ, ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರಿಗೆ ದೆಹಲಿ ಮತದಾರರು ಮತಗಳನ್ನು ನೀಡದೆ ಹೀನಾಯ ಸೋಲು ಉಣ್ಣಿಸಿದ್ದಾರೆ ಎಂದು ಕಿಡಿಕಾರಿದರು.

ಅರವಿಂದ ಕೇಜ್ರಿವಾಲ್‌ ಅವರ ನೇತೃತ್ವದ ಎಎಪಿ ಪಕ್ಷ ದೆಹಲಿಯಲ್ಲಿ ದುರಾಡಳಿತ ನಡೆಸಿದ್ದರು. ಅಲ್ಲದೇ ಅವರು ಮುಖ್ಯಮಂತ್ರಿಯಾಗಿದ್ದ ಜೈಲಿಗೆ ಹೋದರೂ ಲಜ್ಜೆಗೆಟ್ಟು ಆಡಳಿತ ನಡೆಸಿದ್ದ ಸಂವಿಧಾನ ದ್ರೋಹಿಯಾಗಿದ್ದಾರೆ. ದೆಹಲಿ ಒಂದು ಬೃಹತ್‌ ಮಹಾನಗರ ಪಾಲಿಕೆ ಆಡಳಿತ ಇದ್ದಂತೆ. ಬೇರೆ ರಾಜ್ಯಗಳಿಗೆ ಇರುವಂತೆ ಅಧಿಕ ಜವಾಬ್ದಾರಿ ಇಲ್ಲದಿರುವ ಸರ್ಕಾರವಾಗಿತ್ತು. ಇನ್ನೂ ಅತೀ ಹೆಚ್ಚು ಆದಾಯ ಸಂಗ್ರಹವಾಗುವ ಸ್ಥಳವಾಗಿದ್ದು, ಸರ್ಕಾರದ ಖಜಾನೆಯನ್ನು ಲೂಟಿ ಹೊಡೆದ ದೇಶ ಕಂಡ ಹೀನಮನಸ್ಸಿನ ರಾಜಕಾರಣಿಯಾಗಿದ್ದರು ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ದೇಶದಲ್ಲಿ ಎಎಪಿ ಪಕ್ಷದವರು ಕೆಟ್ಟ ಚುನಾವಣಾ ಮಾದರಿಯನ್ನು ಹಾಕಿ, ಉಚಿತ ಯೋಜನೆಗಳ ಮೂಲಕ ದೆಹಲಿ ಮತ್ತು ಪಂಜಾಬ್‌ನಲ್ಲಿ ಗೆಲುವು ಸಾಧಿಸಿದ್ದರು. ಆದರೆ ಇಂದು ಪ್ರಧಾನಿ ಮೋದಿಯವರ ಜನಾಡಳಿತವನ್ನು ಒಪ್ಪಿ ಜನರು ತಮ್ಮ ಮತಗಳನ್ನು ಬಿಜೆಪಿಗೆ ನೀಡಿದ್ದಾರೆ. ಹೀಗಾಗಿ ಚುನಾವಣೆ ಗೆಲುವಿಗೆ ಕಾರಣವಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

20 mins ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

42 mins ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

56 mins ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

1 hour ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

2 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

2 hours ago