ರಾಜ್ಯ

ಪ್ರಧಾನಿ ಮೋದಿರವರ ಜನಪರ ಆಡಳಿತದಿಂದ ಚುನಾವಣೆಯಲ್ಲಿ ಗೆಲುವು: ಗೋವಿಂದ ಕಾರಜೋಳ

ವಿಜಯಪುರ: ಪ್ರಧಾನಿ ಮೋದಿ ಅವರ ಜನಪರ ಆಡಳಿತದಿಂದಾಗಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಜಯಪುರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ ಮೂಲಕ ಬಡ ಜನರ ವೋಟುಗಳಿಸಿ, ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರಿಗೆ ದೆಹಲಿ ಮತದಾರರು ಮತಗಳನ್ನು ನೀಡದೆ ಹೀನಾಯ ಸೋಲು ಉಣ್ಣಿಸಿದ್ದಾರೆ ಎಂದು ಕಿಡಿಕಾರಿದರು.

ಅರವಿಂದ ಕೇಜ್ರಿವಾಲ್‌ ಅವರ ನೇತೃತ್ವದ ಎಎಪಿ ಪಕ್ಷ ದೆಹಲಿಯಲ್ಲಿ ದುರಾಡಳಿತ ನಡೆಸಿದ್ದರು. ಅಲ್ಲದೇ ಅವರು ಮುಖ್ಯಮಂತ್ರಿಯಾಗಿದ್ದ ಜೈಲಿಗೆ ಹೋದರೂ ಲಜ್ಜೆಗೆಟ್ಟು ಆಡಳಿತ ನಡೆಸಿದ್ದ ಸಂವಿಧಾನ ದ್ರೋಹಿಯಾಗಿದ್ದಾರೆ. ದೆಹಲಿ ಒಂದು ಬೃಹತ್‌ ಮಹಾನಗರ ಪಾಲಿಕೆ ಆಡಳಿತ ಇದ್ದಂತೆ. ಬೇರೆ ರಾಜ್ಯಗಳಿಗೆ ಇರುವಂತೆ ಅಧಿಕ ಜವಾಬ್ದಾರಿ ಇಲ್ಲದಿರುವ ಸರ್ಕಾರವಾಗಿತ್ತು. ಇನ್ನೂ ಅತೀ ಹೆಚ್ಚು ಆದಾಯ ಸಂಗ್ರಹವಾಗುವ ಸ್ಥಳವಾಗಿದ್ದು, ಸರ್ಕಾರದ ಖಜಾನೆಯನ್ನು ಲೂಟಿ ಹೊಡೆದ ದೇಶ ಕಂಡ ಹೀನಮನಸ್ಸಿನ ರಾಜಕಾರಣಿಯಾಗಿದ್ದರು ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ದೇಶದಲ್ಲಿ ಎಎಪಿ ಪಕ್ಷದವರು ಕೆಟ್ಟ ಚುನಾವಣಾ ಮಾದರಿಯನ್ನು ಹಾಕಿ, ಉಚಿತ ಯೋಜನೆಗಳ ಮೂಲಕ ದೆಹಲಿ ಮತ್ತು ಪಂಜಾಬ್‌ನಲ್ಲಿ ಗೆಲುವು ಸಾಧಿಸಿದ್ದರು. ಆದರೆ ಇಂದು ಪ್ರಧಾನಿ ಮೋದಿಯವರ ಜನಾಡಳಿತವನ್ನು ಒಪ್ಪಿ ಜನರು ತಮ್ಮ ಮತಗಳನ್ನು ಬಿಜೆಪಿಗೆ ನೀಡಿದ್ದಾರೆ. ಹೀಗಾಗಿ ಚುನಾವಣೆ ಗೆಲುವಿಗೆ ಕಾರಣವಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

9 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

9 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

12 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

13 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

15 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

15 hours ago