ರಾಜ್ಯ

ಪ್ರಧಾನಿ ಮೋದಿರವರ ಜನಪರ ಆಡಳಿತದಿಂದ ಚುನಾವಣೆಯಲ್ಲಿ ಗೆಲುವು: ಗೋವಿಂದ ಕಾರಜೋಳ

ವಿಜಯಪುರ: ಪ್ರಧಾನಿ ಮೋದಿ ಅವರ ಜನಪರ ಆಡಳಿತದಿಂದಾಗಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಜಯಪುರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ ಮೂಲಕ ಬಡ ಜನರ ವೋಟುಗಳಿಸಿ, ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರಿಗೆ ದೆಹಲಿ ಮತದಾರರು ಮತಗಳನ್ನು ನೀಡದೆ ಹೀನಾಯ ಸೋಲು ಉಣ್ಣಿಸಿದ್ದಾರೆ ಎಂದು ಕಿಡಿಕಾರಿದರು.

ಅರವಿಂದ ಕೇಜ್ರಿವಾಲ್‌ ಅವರ ನೇತೃತ್ವದ ಎಎಪಿ ಪಕ್ಷ ದೆಹಲಿಯಲ್ಲಿ ದುರಾಡಳಿತ ನಡೆಸಿದ್ದರು. ಅಲ್ಲದೇ ಅವರು ಮುಖ್ಯಮಂತ್ರಿಯಾಗಿದ್ದ ಜೈಲಿಗೆ ಹೋದರೂ ಲಜ್ಜೆಗೆಟ್ಟು ಆಡಳಿತ ನಡೆಸಿದ್ದ ಸಂವಿಧಾನ ದ್ರೋಹಿಯಾಗಿದ್ದಾರೆ. ದೆಹಲಿ ಒಂದು ಬೃಹತ್‌ ಮಹಾನಗರ ಪಾಲಿಕೆ ಆಡಳಿತ ಇದ್ದಂತೆ. ಬೇರೆ ರಾಜ್ಯಗಳಿಗೆ ಇರುವಂತೆ ಅಧಿಕ ಜವಾಬ್ದಾರಿ ಇಲ್ಲದಿರುವ ಸರ್ಕಾರವಾಗಿತ್ತು. ಇನ್ನೂ ಅತೀ ಹೆಚ್ಚು ಆದಾಯ ಸಂಗ್ರಹವಾಗುವ ಸ್ಥಳವಾಗಿದ್ದು, ಸರ್ಕಾರದ ಖಜಾನೆಯನ್ನು ಲೂಟಿ ಹೊಡೆದ ದೇಶ ಕಂಡ ಹೀನಮನಸ್ಸಿನ ರಾಜಕಾರಣಿಯಾಗಿದ್ದರು ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ದೇಶದಲ್ಲಿ ಎಎಪಿ ಪಕ್ಷದವರು ಕೆಟ್ಟ ಚುನಾವಣಾ ಮಾದರಿಯನ್ನು ಹಾಕಿ, ಉಚಿತ ಯೋಜನೆಗಳ ಮೂಲಕ ದೆಹಲಿ ಮತ್ತು ಪಂಜಾಬ್‌ನಲ್ಲಿ ಗೆಲುವು ಸಾಧಿಸಿದ್ದರು. ಆದರೆ ಇಂದು ಪ್ರಧಾನಿ ಮೋದಿಯವರ ಜನಾಡಳಿತವನ್ನು ಒಪ್ಪಿ ಜನರು ತಮ್ಮ ಮತಗಳನ್ನು ಬಿಜೆಪಿಗೆ ನೀಡಿದ್ದಾರೆ. ಹೀಗಾಗಿ ಚುನಾವಣೆ ಗೆಲುವಿಗೆ ಕಾರಣವಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago