ವಿಜಯಪುರ: ಪ್ರಧಾನಿ ಮೋದಿ ಅವರ ಜನಪರ ಆಡಳಿತದಿಂದಾಗಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ವಿಜಯಪುರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ ಮೂಲಕ ಬಡ ಜನರ ವೋಟುಗಳಿಸಿ, ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಮತದಾರರು ಮತಗಳನ್ನು ನೀಡದೆ ಹೀನಾಯ ಸೋಲು ಉಣ್ಣಿಸಿದ್ದಾರೆ ಎಂದು ಕಿಡಿಕಾರಿದರು.
ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ಎಎಪಿ ಪಕ್ಷ ದೆಹಲಿಯಲ್ಲಿ ದುರಾಡಳಿತ ನಡೆಸಿದ್ದರು. ಅಲ್ಲದೇ ಅವರು ಮುಖ್ಯಮಂತ್ರಿಯಾಗಿದ್ದ ಜೈಲಿಗೆ ಹೋದರೂ ಲಜ್ಜೆಗೆಟ್ಟು ಆಡಳಿತ ನಡೆಸಿದ್ದ ಸಂವಿಧಾನ ದ್ರೋಹಿಯಾಗಿದ್ದಾರೆ. ದೆಹಲಿ ಒಂದು ಬೃಹತ್ ಮಹಾನಗರ ಪಾಲಿಕೆ ಆಡಳಿತ ಇದ್ದಂತೆ. ಬೇರೆ ರಾಜ್ಯಗಳಿಗೆ ಇರುವಂತೆ ಅಧಿಕ ಜವಾಬ್ದಾರಿ ಇಲ್ಲದಿರುವ ಸರ್ಕಾರವಾಗಿತ್ತು. ಇನ್ನೂ ಅತೀ ಹೆಚ್ಚು ಆದಾಯ ಸಂಗ್ರಹವಾಗುವ ಸ್ಥಳವಾಗಿದ್ದು, ಸರ್ಕಾರದ ಖಜಾನೆಯನ್ನು ಲೂಟಿ ಹೊಡೆದ ದೇಶ ಕಂಡ ಹೀನಮನಸ್ಸಿನ ರಾಜಕಾರಣಿಯಾಗಿದ್ದರು ಎಂದು ವಾಗ್ದಾಳಿ ನಡೆಸಿದರು.
ಈ ಹಿಂದೆ ದೇಶದಲ್ಲಿ ಎಎಪಿ ಪಕ್ಷದವರು ಕೆಟ್ಟ ಚುನಾವಣಾ ಮಾದರಿಯನ್ನು ಹಾಕಿ, ಉಚಿತ ಯೋಜನೆಗಳ ಮೂಲಕ ದೆಹಲಿ ಮತ್ತು ಪಂಜಾಬ್ನಲ್ಲಿ ಗೆಲುವು ಸಾಧಿಸಿದ್ದರು. ಆದರೆ ಇಂದು ಪ್ರಧಾನಿ ಮೋದಿಯವರ ಜನಾಡಳಿತವನ್ನು ಒಪ್ಪಿ ಜನರು ತಮ್ಮ ಮತಗಳನ್ನು ಬಿಜೆಪಿಗೆ ನೀಡಿದ್ದಾರೆ. ಹೀಗಾಗಿ ಚುನಾವಣೆ ಗೆಲುವಿಗೆ ಕಾರಣವಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…
ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್ ಪಿತೂರಿ ಮಾಡಿ ವೋಟ್ ಚೋರಿ ಮಾಡಿದ್ದಾರೆ ಎಂದು…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…