ರಾಜ್ಯ

ಪ್ರಧಾನಿ ಮೋದಿರವರ ಜನಪರ ಆಡಳಿತದಿಂದ ಚುನಾವಣೆಯಲ್ಲಿ ಗೆಲುವು: ಗೋವಿಂದ ಕಾರಜೋಳ

ವಿಜಯಪುರ: ಪ್ರಧಾನಿ ಮೋದಿ ಅವರ ಜನಪರ ಆಡಳಿತದಿಂದಾಗಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಜಯಪುರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ ಮೂಲಕ ಬಡ ಜನರ ವೋಟುಗಳಿಸಿ, ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರಿಗೆ ದೆಹಲಿ ಮತದಾರರು ಮತಗಳನ್ನು ನೀಡದೆ ಹೀನಾಯ ಸೋಲು ಉಣ್ಣಿಸಿದ್ದಾರೆ ಎಂದು ಕಿಡಿಕಾರಿದರು.

ಅರವಿಂದ ಕೇಜ್ರಿವಾಲ್‌ ಅವರ ನೇತೃತ್ವದ ಎಎಪಿ ಪಕ್ಷ ದೆಹಲಿಯಲ್ಲಿ ದುರಾಡಳಿತ ನಡೆಸಿದ್ದರು. ಅಲ್ಲದೇ ಅವರು ಮುಖ್ಯಮಂತ್ರಿಯಾಗಿದ್ದ ಜೈಲಿಗೆ ಹೋದರೂ ಲಜ್ಜೆಗೆಟ್ಟು ಆಡಳಿತ ನಡೆಸಿದ್ದ ಸಂವಿಧಾನ ದ್ರೋಹಿಯಾಗಿದ್ದಾರೆ. ದೆಹಲಿ ಒಂದು ಬೃಹತ್‌ ಮಹಾನಗರ ಪಾಲಿಕೆ ಆಡಳಿತ ಇದ್ದಂತೆ. ಬೇರೆ ರಾಜ್ಯಗಳಿಗೆ ಇರುವಂತೆ ಅಧಿಕ ಜವಾಬ್ದಾರಿ ಇಲ್ಲದಿರುವ ಸರ್ಕಾರವಾಗಿತ್ತು. ಇನ್ನೂ ಅತೀ ಹೆಚ್ಚು ಆದಾಯ ಸಂಗ್ರಹವಾಗುವ ಸ್ಥಳವಾಗಿದ್ದು, ಸರ್ಕಾರದ ಖಜಾನೆಯನ್ನು ಲೂಟಿ ಹೊಡೆದ ದೇಶ ಕಂಡ ಹೀನಮನಸ್ಸಿನ ರಾಜಕಾರಣಿಯಾಗಿದ್ದರು ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ದೇಶದಲ್ಲಿ ಎಎಪಿ ಪಕ್ಷದವರು ಕೆಟ್ಟ ಚುನಾವಣಾ ಮಾದರಿಯನ್ನು ಹಾಕಿ, ಉಚಿತ ಯೋಜನೆಗಳ ಮೂಲಕ ದೆಹಲಿ ಮತ್ತು ಪಂಜಾಬ್‌ನಲ್ಲಿ ಗೆಲುವು ಸಾಧಿಸಿದ್ದರು. ಆದರೆ ಇಂದು ಪ್ರಧಾನಿ ಮೋದಿಯವರ ಜನಾಡಳಿತವನ್ನು ಒಪ್ಪಿ ಜನರು ತಮ್ಮ ಮತಗಳನ್ನು ಬಿಜೆಪಿಗೆ ನೀಡಿದ್ದಾರೆ. ಹೀಗಾಗಿ ಚುನಾವಣೆ ಗೆಲುವಿಗೆ ಕಾರಣವಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

4 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

4 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

4 hours ago