ರಾಜ್ಯ

ತಾಕತ್ತಿದ್ದರೆ ಮಾಣಿಪ್ಪಾಡಿ ಅನ್ವರ್‌ ವರದಿಯನ್ನು ಸಿಬಿಐ ತನಿಖೆಗೆ ವಹಿಸಲಿ: ಸಿಎಂಗೆ ಸವಾಲು ಹಾಕಿದ ವಿಜಯೇಂದ್ರ

ಬೆಳಗಾವಿ: ವಕ್ಫ್‌ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರಿಗೆ 150 ಕೋಟಿ ರೂ. ಆಮಿಷವೊಡ್ಡಿರುವ ಬಗ್ಗೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಮಾಡಿರುವ ಆರೋಪ ಕುರಿತು ಅಧಿವೇಶನದಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪ್ರಿಯಾಂಕ್‌ ಅವರು ಹಿಂದಿನ ಅಲ್ಪಸಂಖ್ಯಾತರ ಆಯೋಗ ಅಧ್ಯಕ್ಷರ ಹೆಸರು ಹೇಳಿ ನನ್ನ ಮೇಲೆ ಆರೋಪ ಮಾಡಿದ್ದಾರೆ. ವಕ್ಫ್‌ ಆಸ್ತಿ ಕಬಳಿಕೆ ವಿಚಾರವಾಗಿ ಮಾಣಿಪ್ಪಾಡಿ ವರದಿ ನೀಡಿದ್ದರು. ನಂತರ ಉಪಲೋಕಾಯುಕ್ತ ನ್ಯಾ.ಆನಂದ್‌ 2016ರಲ್ಲಿ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಈ ವರದಿಯನ್ನೆಲ್ಲಾ ಮುಚ್ಚಿ ಹಾಕಿದ್ದರು ಎಂದು ಆಡಳಿತ ಪಕ್ಷದ ವಿರುದ್ಧ ಆರೋಪಿಸಿದರು.

ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧದ ಆರೋಪಗಳನ್ನು ಬೇರೆಡೆಗೆ ತಿರುಗಿಸಲು ಈ ವಿಷಯಗಳನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಅವರಿಗೆ ಸಿಬಿಐ ಮೇಲೆ ತುಂಬಾ ವಿಶ್ವಾಸವಿದೆ ಎನ್ನುವ ಆಗಿದೆ. ಅವರಿಗೆ ಧೈರ್ಯವಿದ್ದರೆ 150 ಕೋಟಿ ರೂ. ಆಮಿಷದ ಆರೋಪದ ಜೊತೆಯಲ್ಲಿ ಅನ್ವರ್‌ ಮಾಣಿಪ್ಪಾಡಿ ಅನ್ವರ್ ವರದಿಯನ್ನು ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

2 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

2 hours ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

2 hours ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

2 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

2 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

2 hours ago