ಬೆಳಗಾವಿ: ವಕ್ಫ್ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ 150 ಕೋಟಿ ರೂ. ಆಮಿಷವೊಡ್ಡಿರುವ ಬಗ್ಗೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಮಾಡಿರುವ ಆರೋಪ ಕುರಿತು ಅಧಿವೇಶನದಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಪ್ರಿಯಾಂಕ್ ಅವರು ಹಿಂದಿನ ಅಲ್ಪಸಂಖ್ಯಾತರ ಆಯೋಗ ಅಧ್ಯಕ್ಷರ ಹೆಸರು ಹೇಳಿ ನನ್ನ ಮೇಲೆ ಆರೋಪ ಮಾಡಿದ್ದಾರೆ. ವಕ್ಫ್ ಆಸ್ತಿ ಕಬಳಿಕೆ ವಿಚಾರವಾಗಿ ಮಾಣಿಪ್ಪಾಡಿ ವರದಿ ನೀಡಿದ್ದರು. ನಂತರ ಉಪಲೋಕಾಯುಕ್ತ ನ್ಯಾ.ಆನಂದ್ 2016ರಲ್ಲಿ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಈ ವರದಿಯನ್ನೆಲ್ಲಾ ಮುಚ್ಚಿ ಹಾಕಿದ್ದರು ಎಂದು ಆಡಳಿತ ಪಕ್ಷದ ವಿರುದ್ಧ ಆರೋಪಿಸಿದರು.
ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧದ ಆರೋಪಗಳನ್ನು ಬೇರೆಡೆಗೆ ತಿರುಗಿಸಲು ಈ ವಿಷಯಗಳನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಅವರಿಗೆ ಸಿಬಿಐ ಮೇಲೆ ತುಂಬಾ ವಿಶ್ವಾಸವಿದೆ ಎನ್ನುವ ಆಗಿದೆ. ಅವರಿಗೆ ಧೈರ್ಯವಿದ್ದರೆ 150 ಕೋಟಿ ರೂ. ಆಮಿಷದ ಆರೋಪದ ಜೊತೆಯಲ್ಲಿ ಅನ್ವರ್ ಮಾಣಿಪ್ಪಾಡಿ ಅನ್ವರ್ ವರದಿಯನ್ನು ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…