Mysore
20
few clouds

Social Media

ಬುಧವಾರ, 18 ಮಾರ್ಚ್ 2026
Light
Dark

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡಲಿ: ಕೆ.ಎಸ್.ಈಶ್ವರಪ್ಪ ಆಗ್ರಹ

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶರಪ್ಪ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು ಎಂದರು.

ನನ್ನ ಮೇಲೆ ಆಪಾದನೆ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಸಹ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ ಎಂದು ಆಗ್ರಹಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಶ್ರೀಮತಿಯವರನ್ನು ಎಲ್ಲಿ ಸೇರಿಸಿಬಿಡುತ್ತಾರೋ ಎಂಬ ಅನುಮಾನವಿದೆ. ಪಾಪ ಅವರು ಗೌರಮ್ಮರ ರೀತಿ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬಾರದೇ ಇರಲಿ ಎಂದರು.

ಕಾನೂನಿಗೆ ಮುಂದೆ ಎಲ್ಲರೂ ಒಂದೇ. ಹಾಗಾಗಿ ಕಾನೂನಿಗೆ ತಲೆಬಾಗಲೇಬೇಕು. ಆದ್ದರಿಂದ ಸಿದ್ದರಾಮಯ್ಯ ಅವರು, ತನಿಖೆಗೆ ಸಹಕರಿಸುತ್ತಾರೆ ಎಂಬ ನಂಬಿಕೆಯಿದೆ ಎಂದರು.

Tags:
error: Content is protected !!