ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್ಗೆ ಅನುಮತಿ ನೀಡಿರುವ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಈ ಬೆಳವಣಿಗೆಗಳಿಂದ ಬಿಜೆಪಿಯವರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಕಿಡಿಕಾರಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟೀಸ್ ಕೊಟ್ಟರು. ಆಗಲೇ ನಮ್ಮ ಪಕ್ಷದವರಿಗೆ ರಾಜ್ಯಪಾಲರ ವಿರುದ್ಧ ಅನುಮಾನ ಬಂದಿತ್ತು. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕವನ್ನು ಗುರಿ ಮಾಡಿಕೊಂಡು ರಾಜಕಾರಣ ಮಾಡುತ್ತಿದೆ. ನಮ್ಮ ಪಕ್ಕಕ್ಕೆ ಹೆಚ್ಚಿನ ಬಹುಮತ ಬಂದಿರುವ ಕಾರಣಕ್ಕೆ ಇದನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನ ಕೊಟ್ಟಿದ್ದು ಬಿಜೆಪಿ ಸರ್ಕಾರ. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯರನ್ನು ಬಲಿಪಶು ಮಾಡಲು ಸಂಚು ನಡೆಸುತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು.
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…