ರಾಜ್ಯ

ರಾಜ್ಯಪಾಲರು ಕೇಂದ್ರ ಸರ್ಕಾರದ ಪ್ರತಿನಿಧಿಯಂತೆ ಕೆಲಸ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿದ್ದಾರೆ.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ನಲ್ಲಿ ನಡೆದ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಲೋಕಾಯುಕ್ತದವರು 23-11-2023ರಂದು ಅನುಮತಿ ಕೋರಿದ್ದು, ಆ ಬಗ್ಗೆ ರಾಜ್ಯಪಾಲರು ಯಾವುದೇ ನಿರ್ಣಯ ಕೈಗೊಳ್ಳದ ಕಾರಣ, ಲೋಕಾಯುಕ್ತ ಮತ್ತೊಮ್ಮೆ ಕೋರಿದ್ದಾರೆ. ಆದರೂ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲ.

ಆದರೆ 26-07-2024ರಂದು ಅಬ್ರಾಹಂ ಅವರು ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ ತಕ್ಷಣ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇಂತಹ ತಾರತಮ್ಯ ಏಕೆ ನಡೆಯಬೇಕು ಎಂದು ಪ್ರಶ್ನಿಸಿದರು.

ನಮಗೆ ರಾಜ್ಯಪಾಲರ ಮೇಲೆ ಗೌರವವಿದೆ. ಆದರೆ ಶಶಿಕಲಾ ಜೊಲ್ಲೆ, ಎಚ್.ಡಿ.ಕುಮಾರಸ್ವಾಮಿ, ಮುರುಗೇಶ್‌ ನಿರಾಣಿ, ಜನಾರ್ಧನ ರೆಡ್ಡಿ ಅವರ ಮೇಲೂ ಆರೋಪಗಳಿದ್ದು, ಇದುವರೆಗೆ ತನಿಖೆಗೆ ಯಾಕೆ ಆದೇಶ ನೀಡಿಲ್ಲ. ಆದ್ದರಿಂದ ರಾಜ್ಯಪಾಲರು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

6 seconds ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

16 mins ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

40 mins ago

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

1 hour ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸಂದೇಶ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…

1 hour ago