ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯರಿಂದ ಪ್ರತಿಕ್ರಿಯೆ ಕೇಳಿದ್ದಾರೆ.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಲು ಮತ್ತು ಸಿಎಂ ರಾಜೀನಾಮೆಗೆ ಕೋರಿ ಬಿಜೆಪಿ ಶಾಸಕರ ನಿಯೋಗ ಜುಲೈ.25ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಿಎಂ ಸಿದ್ದರಾಮಯ್ಯರಿಂದ ಉತ್ತರ ಕೇಳುವುದು ಅನಿವಾರ್ಯ. ಹೀಗಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಇದು ರಾಜಕೀಯ ಪ್ರೇರಿತ ಎಂದು ನಂಬಲು ಕಾರಣವಿದೆ ಎಂದು ಆರೋಪಿಸಿದ್ದಾರೆ.
ಒಂದು ವೇಳೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಲು ಮುಂದಾದರೆ ನಾವು ಇದನ್ನು ರಾಜಕೀಯ ಪ್ರೇರಿತ ಎಂದು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಕೂಡ ಕಿಡಿಕಾರಿದ್ದು, ಇದು ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…