ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅನೇಕ ಯೋಜನೆಗಳು ರೂಪಿಸುತ್ತಿದೆ.
ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈ ವರ್ಷದಿಂದ ಶಿಕ್ಷಣ ಇಲಾಖೆ ಜಾರಿ ಮಾಡಲು ಮುಂದಾಗಿದೆ.
ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, 25 ಸಾವಿರ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ. ಈ ಯೋಜನೆಗೆ 12 ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ. ಈ ವರ್ಷದಿಂದಲೇ ತರಬೇತಿ ಕಾರ್ಯಕ್ರಮ ನಡೆಯಲಿದೆ. ಆನ್ಲೈನ್ನಲ್ಲೂ ತರಬೇತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ಉಚಿತವಾಗಿಯೇ ಸರ್ಕಾರದ ಕಡೆಯಿಂದ ತರಬೇತಿ ನೀಡಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದ್ದು, ನಮ್ಮ ಸರ್ಕಾರ ವಿದ್ಯಾರ್ಥಿಗಳ ಏಳಿಗೆಗೆ ಶ್ರಮ ವಹಿಸುತ್ತಿದೆ ಎಂದರು.
ಇದರ ಜೊತೆಗೆ 8, 9 ಹಾಗೂ 10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದರು.
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…