ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ ಕೇಳಿಬರುತ್ತಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ.1ರಿಂದ ಹೊಸ ದರಗಳು ಜಾರಿಗೆ ಬರಲಿದೆ.
ರಾಜ್ಯದ ಮದ್ಯ ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪರಿಶೀಲಿಸಲು ಕರ್ನಾಟಕ ಸರ್ಕಾರ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿ ಇತ್ತೀಚೆಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿತ್ತು. ಹೀಗಾಗಿ ಶೀಘ್ರದಲ್ಲೇ ಅಬಕಾರಿ ತೆರಿಗೆ ಪರಿಷ್ಕರಣೆಯಾಗಲಿದ್ದು, ಮದ್ಯದ ದರ ಏರಿಕೆಯಾಗುವ ಸಾಧ್ಯತೆಯಿದೆ.
ಒಂದು ಫುಲ್ ಬಾಟಲ್ ಮದ್ಯದ ಮೇಲೆ ಎಂಆರ್ಪಿ ದರದಲ್ಲಿ ಸುಮಾರು 50 ರಿಂದ 100 ರೂಪಾಯಿಗಳಷ್ಟು ಹೆಚ್ಚಳವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಸರ್ವಿಸ್ ಚಾರ್ಜ್ ಸೇರಿ ಈ ಹೊರೆ ಮತ್ತಷ್ಟು ಹೆಚ್ಚಾಗಲಿದೆ.
ಕಳೆದ ಮೂರು ವರ್ಷಗಳ ಅವಧಿಯಲ್ಲಿ ಐದನೇ ಬಾರಿಗೆ ದರ ಏರಿಕೆ ಮಾಡುತ್ತಿರುವುದಕ್ಕೆ ಮದ್ಯಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕುಡುಕರನ್ನೇ ಟಾರ್ಗೆಟ್ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…