ರಾಜ್ಯ

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ ಕೇಳಿಬರುತ್ತಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ.1ರಿಂದ ಹೊಸ ದರಗಳು ಜಾರಿಗೆ ಬರಲಿದೆ.

ರಾಜ್ಯದ ಮದ್ಯ ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪರಿಶೀಲಿಸಲು ಕರ್ನಾಟಕ ಸರ್ಕಾರ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿ ಇತ್ತೀಚೆಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿತ್ತು. ಹೀಗಾಗಿ ಶೀಘ್ರದಲ್ಲೇ ಅಬಕಾರಿ ತೆರಿಗೆ ಪರಿಷ್ಕರಣೆಯಾಗಲಿದ್ದು, ಮದ್ಯದ ದರ ಏರಿಕೆಯಾಗುವ ಸಾಧ್ಯತೆಯಿದೆ.

ಒಂದು ಫುಲ್‌ ಬಾಟಲ್‌ ಮದ್ಯದ ಮೇಲೆ ಎಂಆರ್‌ಪಿ ದರದಲ್ಲಿ ಸುಮಾರು 50 ರಿಂದ 100 ರೂಪಾಯಿಗಳಷ್ಟು ಹೆಚ್ಚಳವಾಗಲಿದ್ದು, ಬಾರ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸರ್ವಿಸ್‌ ಚಾರ್ಜ್‌ ಸೇರಿ ಈ ಹೊರೆ ಮತ್ತಷ್ಟು ಹೆಚ್ಚಾಗಲಿದೆ.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಐದನೇ ಬಾರಿಗೆ ದರ ಏರಿಕೆ ಮಾಡುತ್ತಿರುವುದಕ್ಕೆ ಮದ್ಯಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕುಡುಕರನ್ನೇ ಟಾರ್ಗೆಟ್‌ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

12 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

12 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

13 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

13 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

14 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

15 hours ago