ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ ಕೇಳಿಬರುತ್ತಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ.1ರಿಂದ ಹೊಸ ದರಗಳು ಜಾರಿಗೆ ಬರಲಿದೆ.
ರಾಜ್ಯದ ಮದ್ಯ ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪರಿಶೀಲಿಸಲು ಕರ್ನಾಟಕ ಸರ್ಕಾರ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿ ಇತ್ತೀಚೆಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿತ್ತು. ಹೀಗಾಗಿ ಶೀಘ್ರದಲ್ಲೇ ಅಬಕಾರಿ ತೆರಿಗೆ ಪರಿಷ್ಕರಣೆಯಾಗಲಿದ್ದು, ಮದ್ಯದ ದರ ಏರಿಕೆಯಾಗುವ ಸಾಧ್ಯತೆಯಿದೆ.
ಒಂದು ಫುಲ್ ಬಾಟಲ್ ಮದ್ಯದ ಮೇಲೆ ಎಂಆರ್ಪಿ ದರದಲ್ಲಿ ಸುಮಾರು 50 ರಿಂದ 100 ರೂಪಾಯಿಗಳಷ್ಟು ಹೆಚ್ಚಳವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಸರ್ವಿಸ್ ಚಾರ್ಜ್ ಸೇರಿ ಈ ಹೊರೆ ಮತ್ತಷ್ಟು ಹೆಚ್ಚಾಗಲಿದೆ.
ಕಳೆದ ಮೂರು ವರ್ಷಗಳ ಅವಧಿಯಲ್ಲಿ ಐದನೇ ಬಾರಿಗೆ ದರ ಏರಿಕೆ ಮಾಡುತ್ತಿರುವುದಕ್ಕೆ ಮದ್ಯಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕುಡುಕರನ್ನೇ ಟಾರ್ಗೆಟ್ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…