ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ವೈದ್ಯರುಗಳಿಗೆ ಕರೆ ನೀಡಿದರು.
ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಅನಾಹುತವಾಗುತ್ತದೆ ಎಂಬ ಎಚ್ಚರವಿರಬೇಕು. ಇದು ದೇವರ ಕೆಲಸ ಎಂದು ಮಾಡಿದರೆ ಸಮಾಜದಲ್ಲಿ ರೋಗಗಳನ್ನು ತಡೆಗಟ್ಟಿ, ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಕಿವಿಮಾತು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವೈದ್ಯ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿ. ವೈದ್ಯೋ ನಾರಾಯಣೋ ಹರಿ ಎಂದು ಭಾವಿಸಲಾಗುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಹಾಗೂ ರಕ್ಷಣೆ ಮಾಡುವವರು ವೈದ್ಯರು ಎಂದರು. ಕೊರೊನಾ ಸಂದರ್ಭದಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ತಮ್ಮ ಜೀವದ ಹಂಗನ್ನು ತೊರೆದು ವೈದ್ಯರು ದುಡಿದಿದ್ದಾರೆ ಎಂದು ವೈದ್ಯರ ಸೇವೆಗಳನ್ನು ಹಾಡಿ ಹೊಗಳಿದರು.
ಕಾರ್ಯಕ್ರಮದಲ್ಲಿ ಜೀವನ ಸಾಧನೆ ಹಾಗೂ ಇತರೆ ಪ್ರಶಸ್ತಿಗಳಿಗೆ ಭಾಜನರಾದ ವೈದ್ಯರನ್ನು ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ಸೇರಿದಂತೆ ವೈದ್ಯರ ಸಂಘದ ಅಧ್ಯಕ್ಷರುಗಳು ಭಾಗಿಯಾಗಿದ್ದರು.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…