ರಾಜ್ಯ

ಸರ್ಕಾರದ ನಕ್ಸಲ್ ಪ್ಯಾಕೇಜ್ ಬಗ್ಗೆ ಮಾಜಿ ಸಚಿವ ಸುನೀಲ್ ಕುಮಾರ್ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ನಕ್ಸಲ್ ಪ್ಯಾಕೇಜ್ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಫೇಸ್‌ಬುಕ್‌ನಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವವರು, ಈಗ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿ ಸಮೋಸಾ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ. ಖುದ್ದು ಸಿದ್ದರಾಮಯ್ಯನವರೇ ಅರ್ಬನ್ ನಕ್ಸಲರ ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ತತ್ವ- ಸಿದ್ಧಾಂತ ಅರ್ಬನ್ ನಕ್ಸಲರು ಹೈಜಾಕ್ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಅಮಾಯಕರಿಗೆ ಕ್ಷಮಾದಾನ ನೀಡಲೇಬಾರದು ಎಂಬುದು ನಮ್ಮ ವಾದವಲ್ಲ. ಆದರೆ ಶರಣಾದ ರೀತಿ, ಪ್ಯಾಕೇಜ್ ಘೋಷಣೆ ವಿಧಾನ, ಪ್ರಕರಣ ರದ್ಧತಿ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಆಕ್ಷೇಪವಿದೆ. ಸಿದ್ದರಾಮಯ್ಯನವರ ಕೋರ್ ಕಮಿಟಿ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಎಷ್ಟೇ ಅರಚಿದರೂ ನಾವು ಹೆದರುವುದಿಲ್ಲ. ಅಷ್ಟಕ್ಕೂ ಬೇಕಾಬಿಟ್ಟಿ ಪ್ಯಾಕೇಜ್ ಘೋಷಿಸುವುದಕ್ಕೆ ರಾಜ್ಯದ ಬೊಕ್ಕಸದ ಹಣ ಯಾರದೋ ಜಮೀನು ನುಂಗಿ- ನೀರು ಕುಡಿದು ಸಂಪಾದಿಸಿದ ಸ್ವಯಾರ್ಜಿತ ಸೈಟಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಶರಣಾಗತಿ ಪ್ರಕ್ರಿಯೆ ಬಗ್ಗೆ ಸಾಕಷ್ಟು ಅನುಮಾನಗಳಿವೆ. ವಿಕ್ರಮ್ ಗೌಡ ಎನ್ ಕೌಂಟರ್ ಬಳಿಕ ಅರ್ಬನ್ ನಕ್ಸಲರು ಶರಣಾಗತಿ ಪ್ರಕ್ರಿಯೆ ಬಗ್ಗೆ ನಡೆಸಿದ ಪ್ರಹಸನದಲ್ಲಿ ಸಿಎಂ ನಿರ್ದೇಶನದ ಭಾಗವೆಷ್ಟು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ.

ಒಂದೆಡೆ ನಕ್ಸಲ್ ಶರಣಾಗತಿ ಬಗ್ಗೆ ಮಾತನಾಡುವ ಸರ್ಕಾರ, ಅರಣ್ಯ ವಾಸಿಗಳಿಗೆ ಪುನರ್ಸತಿ ಬಗ್ಗೆ ಯಾವ ನಿಲುವು ಹೊಂದಿದೆ ಎಂಬುದನ್ನೂ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago