ರಾಜ್ಯ

ಸರ್ಕಾರದ ನಕ್ಸಲ್ ಪ್ಯಾಕೇಜ್ ಬಗ್ಗೆ ಮಾಜಿ ಸಚಿವ ಸುನೀಲ್ ಕುಮಾರ್ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ನಕ್ಸಲ್ ಪ್ಯಾಕೇಜ್ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಫೇಸ್‌ಬುಕ್‌ನಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವವರು, ಈಗ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿ ಸಮೋಸಾ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ. ಖುದ್ದು ಸಿದ್ದರಾಮಯ್ಯನವರೇ ಅರ್ಬನ್ ನಕ್ಸಲರ ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ತತ್ವ- ಸಿದ್ಧಾಂತ ಅರ್ಬನ್ ನಕ್ಸಲರು ಹೈಜಾಕ್ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಅಮಾಯಕರಿಗೆ ಕ್ಷಮಾದಾನ ನೀಡಲೇಬಾರದು ಎಂಬುದು ನಮ್ಮ ವಾದವಲ್ಲ. ಆದರೆ ಶರಣಾದ ರೀತಿ, ಪ್ಯಾಕೇಜ್ ಘೋಷಣೆ ವಿಧಾನ, ಪ್ರಕರಣ ರದ್ಧತಿ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಆಕ್ಷೇಪವಿದೆ. ಸಿದ್ದರಾಮಯ್ಯನವರ ಕೋರ್ ಕಮಿಟಿ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಎಷ್ಟೇ ಅರಚಿದರೂ ನಾವು ಹೆದರುವುದಿಲ್ಲ. ಅಷ್ಟಕ್ಕೂ ಬೇಕಾಬಿಟ್ಟಿ ಪ್ಯಾಕೇಜ್ ಘೋಷಿಸುವುದಕ್ಕೆ ರಾಜ್ಯದ ಬೊಕ್ಕಸದ ಹಣ ಯಾರದೋ ಜಮೀನು ನುಂಗಿ- ನೀರು ಕುಡಿದು ಸಂಪಾದಿಸಿದ ಸ್ವಯಾರ್ಜಿತ ಸೈಟಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಶರಣಾಗತಿ ಪ್ರಕ್ರಿಯೆ ಬಗ್ಗೆ ಸಾಕಷ್ಟು ಅನುಮಾನಗಳಿವೆ. ವಿಕ್ರಮ್ ಗೌಡ ಎನ್ ಕೌಂಟರ್ ಬಳಿಕ ಅರ್ಬನ್ ನಕ್ಸಲರು ಶರಣಾಗತಿ ಪ್ರಕ್ರಿಯೆ ಬಗ್ಗೆ ನಡೆಸಿದ ಪ್ರಹಸನದಲ್ಲಿ ಸಿಎಂ ನಿರ್ದೇಶನದ ಭಾಗವೆಷ್ಟು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ.

ಒಂದೆಡೆ ನಕ್ಸಲ್ ಶರಣಾಗತಿ ಬಗ್ಗೆ ಮಾತನಾಡುವ ಸರ್ಕಾರ, ಅರಣ್ಯ ವಾಸಿಗಳಿಗೆ ಪುನರ್ಸತಿ ಬಗ್ಗೆ ಯಾವ ನಿಲುವು ಹೊಂದಿದೆ ಎಂಬುದನ್ನೂ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago