ರಾಜ್ಯ

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ.

ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೋಬ್ಬರಿ 70 ಲಕ್ಷ ರೂ ವಿದ್ಯುತ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ಕೆಐಎಡಿಬಿ ನೋಟಿಸ್‌ ನೀಡಿತ್ತು.

ಈ ಬಗ್ಗೆ ಮಠದ ಸ್ವಾಮೀಜಿಗಳು ಪ್ರತಿಕ್ರಿಯೆ ನೀಡಿದ್ದು, ನಾವು ಹಣ ಪಾವತಿ ಮಾಡುವುದಿಲ್ಲ ಎಂದು ಉತ್ತರ ನೀಡಿದ್ದರು.

ತುಮಕೂರು ತಾಲ್ಲೂಕಿನ ಹೊನ್ನೇನಹಳ್ಳಿ ಕೆರೆಯಿಂದ ಕೆಐಎಡಿಬಿ ಪೈಪ್‌ಲೈನ್‌ ಮೂಲಕ ದೇವರಾಯನಪಟ್ಟಣಕ್ಕೆ ನೀರು ಹರಿಸಲಾಗಿತ್ತು. ಕೆರೆಯು ಸಿದ್ಧಗಂಆ ಮಠದ ಸನಿಹದಲ್ಲೇ ಇದೆ. 2023-24ನೇ ಸಾಲಿನಲ್ಲಿ ಮಠದ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ನೀರು ನೀಡಲಾಗಿತ್ತು. ಸಿದ್ಧಗಂಗಾ ಮಠ ಈ ನೀರನ್ನು ದೈನಂದಿನ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಈ ನೀರಿಗೆ ಹಣ ಪಾವತಿಸುವಂತೆ ಕೆಐಎಡಿಬಿ ಸೂಚನೆ ನೀಡಿತ್ತು.

ಈ ಬಗ್ಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ನೋಟಿಸ್‌ ಹಿಂಪಡೆದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ್‌ ಅವರು, ಇದು ಏಪ್ರಿಲ್‌ನಲ್ಲಿ ಕೊಟ್ಟ ನೋಟಿಸ್‌ ಆಗಿದೆ. ಆ ಕೆರೆಯಿಂದ ನೀರು ಬಳಸಿರುವುದು ತಪ್ಪಲ್ಲ. ನೀರೇ ಬಳಸದೇ ನೋಟಿಸ್‌ ಕೊಟ್ಟಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದು, ಸ್ವಾಮೀಜಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…

41 mins ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

43 mins ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

46 mins ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

48 mins ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

53 mins ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

56 mins ago