ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ.
ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೋಬ್ಬರಿ 70 ಲಕ್ಷ ರೂ ವಿದ್ಯುತ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ಕೆಐಎಡಿಬಿ ನೋಟಿಸ್ ನೀಡಿತ್ತು.
ಈ ಬಗ್ಗೆ ಮಠದ ಸ್ವಾಮೀಜಿಗಳು ಪ್ರತಿಕ್ರಿಯೆ ನೀಡಿದ್ದು, ನಾವು ಹಣ ಪಾವತಿ ಮಾಡುವುದಿಲ್ಲ ಎಂದು ಉತ್ತರ ನೀಡಿದ್ದರು.
ತುಮಕೂರು ತಾಲ್ಲೂಕಿನ ಹೊನ್ನೇನಹಳ್ಳಿ ಕೆರೆಯಿಂದ ಕೆಐಎಡಿಬಿ ಪೈಪ್ಲೈನ್ ಮೂಲಕ ದೇವರಾಯನಪಟ್ಟಣಕ್ಕೆ ನೀರು ಹರಿಸಲಾಗಿತ್ತು. ಕೆರೆಯು ಸಿದ್ಧಗಂಆ ಮಠದ ಸನಿಹದಲ್ಲೇ ಇದೆ. 2023-24ನೇ ಸಾಲಿನಲ್ಲಿ ಮಠದ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ನೀರು ನೀಡಲಾಗಿತ್ತು. ಸಿದ್ಧಗಂಗಾ ಮಠ ಈ ನೀರನ್ನು ದೈನಂದಿನ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಈ ನೀರಿಗೆ ಹಣ ಪಾವತಿಸುವಂತೆ ಕೆಐಎಡಿಬಿ ಸೂಚನೆ ನೀಡಿತ್ತು.
ಈ ಬಗ್ಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ನೋಟಿಸ್ ಹಿಂಪಡೆದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ್ ಅವರು, ಇದು ಏಪ್ರಿಲ್ನಲ್ಲಿ ಕೊಟ್ಟ ನೋಟಿಸ್ ಆಗಿದೆ. ಆ ಕೆರೆಯಿಂದ ನೀರು ಬಳಸಿರುವುದು ತಪ್ಪಲ್ಲ. ನೀರೇ ಬಳಸದೇ ನೋಟಿಸ್ ಕೊಟ್ಟಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದು, ಸ್ವಾಮೀಜಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…