ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ.
ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೋಬ್ಬರಿ 70 ಲಕ್ಷ ರೂ ವಿದ್ಯುತ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ಕೆಐಎಡಿಬಿ ನೋಟಿಸ್ ನೀಡಿತ್ತು.
ಈ ಬಗ್ಗೆ ಮಠದ ಸ್ವಾಮೀಜಿಗಳು ಪ್ರತಿಕ್ರಿಯೆ ನೀಡಿದ್ದು, ನಾವು ಹಣ ಪಾವತಿ ಮಾಡುವುದಿಲ್ಲ ಎಂದು ಉತ್ತರ ನೀಡಿದ್ದರು.
ತುಮಕೂರು ತಾಲ್ಲೂಕಿನ ಹೊನ್ನೇನಹಳ್ಳಿ ಕೆರೆಯಿಂದ ಕೆಐಎಡಿಬಿ ಪೈಪ್ಲೈನ್ ಮೂಲಕ ದೇವರಾಯನಪಟ್ಟಣಕ್ಕೆ ನೀರು ಹರಿಸಲಾಗಿತ್ತು. ಕೆರೆಯು ಸಿದ್ಧಗಂಆ ಮಠದ ಸನಿಹದಲ್ಲೇ ಇದೆ. 2023-24ನೇ ಸಾಲಿನಲ್ಲಿ ಮಠದ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ನೀರು ನೀಡಲಾಗಿತ್ತು. ಸಿದ್ಧಗಂಗಾ ಮಠ ಈ ನೀರನ್ನು ದೈನಂದಿನ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಈ ನೀರಿಗೆ ಹಣ ಪಾವತಿಸುವಂತೆ ಕೆಐಎಡಿಬಿ ಸೂಚನೆ ನೀಡಿತ್ತು.
ಈ ಬಗ್ಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ನೋಟಿಸ್ ಹಿಂಪಡೆದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ್ ಅವರು, ಇದು ಏಪ್ರಿಲ್ನಲ್ಲಿ ಕೊಟ್ಟ ನೋಟಿಸ್ ಆಗಿದೆ. ಆ ಕೆರೆಯಿಂದ ನೀರು ಬಳಸಿರುವುದು ತಪ್ಪಲ್ಲ. ನೀರೇ ಬಳಸದೇ ನೋಟಿಸ್ ಕೊಟ್ಟಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದು, ಸ್ವಾಮೀಜಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…