ಹುಬ್ಬಳ್ಳಿ: ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ಮಾಡಿದವರು ಗೂಂಡಾಗಳಾಗಿರಲಿಲ್ಲ ಹೋರಾಟಗಾರರಾಗಿದ್ದರು. ಆದರೆ, ಸರ್ಕಾರದಿಂದ ಅವರ ಮೇಲೆ ನಡೆಸಿದ ದೌರ್ಜನ್ಯ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು(ಡಿಸೆಂಬರ್.15) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಲಾಠಿ ಬೀಸಿದ್ದಾರೆ ಎಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯರೇ ಅದಕ್ಕೆ ಬಾಧ್ಯಸ್ಥರು. ಹೋರಾಟದ ವಿಚಾರವಾಗಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ಹಾಗೂ ಬಸವಜಯ ಮೃತ್ಯುಂಜಯ ಸ್ವಾಮೀಜಿ ನನಗೆ ಕರೆ ಮಾಡಿದ್ದರು. ಅಲ್ಲದೇ ನನಗೆ ಬಂದಿರುವ ಮಾಹಿತಿ ಪ್ರಕಾರ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದರು. ಆ ವೇಳೆ ಪೊಲೀಸರು ಕನಿಷ್ಠ ಬಲಪ್ರಯೋಗ ಮಾಡಬಹುದಿತ್ತು. ಆದರೆ ಗರಿಷ್ಠ ಬಲ ಪ್ರಯೋಗ ಮಾಡಿ ಶತ್ರುಗಳ ಹಾಗೇ ವರ್ತಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಕೋವಿಡ್ ಸಂದರ್ಭದಲ್ಲಿ ಅವ್ಯವಹಾರ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಬೆದರಿಸುವ ತಂತ್ರ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾವು ಹೆದರಲ್ಲವೆಂದ ಕೂಡಲೇ ಪ್ರಕರಣ ದಾಖಲಿಸಿ ತನಿಖೆಯೆನ್ನುತ್ತ ಯಾರಾದ್ದೋ ಹೆಸರು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಅನಗತ್ಯವಾಗಿ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಚಿವ ಕೆ.ಸುಧಾಕರ್ ಹೆಸರು ಹೇಳುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಅವರೆಲ್ಲಾ ಮಾನಹಾನಿ ಪ್ರಕರಣ ದಾಖಲಿಸುವಂತಾಗಬೇಕು ಎಂದು ಹೇಳಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…