ರಾಜ್ಯ

ಭ್ರೂಣ ಹತ್ಯೆ ತಡೆಗೆ ಆರೋಗ್ಯ ಇಲಾಖೆ ಪ್ಲಾನ್: ಸುಳಿವು ಕೊಟ್ಟವರಿಗೆ ನೀಡಲಾಗುತ್ತಿದ್ದ ಬಹುಮಾನ ದರದಲ್ಲಿ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಭ್ರೂಣಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಭ್ರೂಣಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಆರೋಗ್ಯ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಸುಳಿವು ನೀಡುವವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.

ಇತ್ತೀಚೆಗೆ ಭ್ರೂಣ ಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲಿ ಲೈಸೆನ್ಸ್ ಇಲ್ಲದ ಕ್ಲಿನಿಕ್‌ಗಳು ಹಾಗೂ ಚಿಕ್ಕ ಚಿಕ್ಕ ಆಸ್ಪತ್ರೆಗಳನ್ನು ತೆರೆದು ಈ ಕೃತ್ಯಕ್ಕೆ ಕೈ ಹಾಕಲಾಗುತ್ತಿದೆ. ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಬಿಗ್ ಪ್ಲಾನ್ ಮಾಡಿದ್ದು, ಭ್ರೂಣಹತ್ಯೆ ಪ್ರಕರಣದ ಸುಳಿವು ಕೊಟ್ಟವರಿಗೆ ಒಂದು ಲಕ್ಷ ರೂ ಬಹುಮಾನ ಘೋಷಿಸಿದೆ.

ಈ ಮೊದಲು ಭ್ರೂಣಹತ್ಯೆ ಪ್ರಕರಣದ ಸುಳಿವು ನೀಡಿದವರಿಗೆ ಕೇವಲ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೂ ರಾಜ್ಯದಲ್ಲಿ ಯಾರಿಗೂ ಕಾಣದಂತೆ ಯಥೇಚ್ಛವಾಗಿ ಭ್ರೂಣಲಿಂಗ ಹತ್ಯೆ ಪ್ರಕರಣಗಳು ನಡೆಯುತ್ತಲೇ ಇದ್ದವು.

ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಪ್ರಕರಣದ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದೆ. ರಾಷ್ಟ್ರೀಯ ಅಭಿಯಾನದಡಿ 50 ಸಾವಿರ ಹಾಗೂ ಆಯಾಯ ಜಿಲ್ಲೆಗಳಲ್ಲಿ ಸಂಗ್ರಹಿಸಿರುವ ಪಿಸಿ ಅಂಡ್ ಪಿಎನ್‌ಟಿಡಿ ಶುಲ್ಕದಿಂದ 50 ಸಾವಿರ ರೂ ನೀಡಲು ಮುಂದಾಗಿದೆ.

andolana

Recent Posts

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

7 mins ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

19 mins ago

ಮಡಿಕೇರಿ| ಕಾಡಾನೆ ದಾಳಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…

45 mins ago

ನಾಳೆ ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ವಿಧಾನಮಂಡಲ ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.‌10ರಂದು ಸಂಜೆ ಬೆಂಗಳೂರಿನ…

2 hours ago

ಮಂಡ್ಯ| 2 ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ

ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ…

2 hours ago

ನಂಜನಗೂಡು| ಕಸುವಿನಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ನಾರಾಯಣಸ್ವಾಮಿ ದೇಗುಲದ ಜೀರ್ಣೋದ್ಧಾರ ಕಾರ್ಯಕ್ರಮ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು…

2 hours ago