ರಾಜ್ಯ

ಭ್ರೂಣ ಹತ್ಯೆ ತಡೆಗೆ ಆರೋಗ್ಯ ಇಲಾಖೆ ಪ್ಲಾನ್: ಸುಳಿವು ಕೊಟ್ಟವರಿಗೆ ನೀಡಲಾಗುತ್ತಿದ್ದ ಬಹುಮಾನ ದರದಲ್ಲಿ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಭ್ರೂಣಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಭ್ರೂಣಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಆರೋಗ್ಯ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಸುಳಿವು ನೀಡುವವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.

ಇತ್ತೀಚೆಗೆ ಭ್ರೂಣ ಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲಿ ಲೈಸೆನ್ಸ್ ಇಲ್ಲದ ಕ್ಲಿನಿಕ್‌ಗಳು ಹಾಗೂ ಚಿಕ್ಕ ಚಿಕ್ಕ ಆಸ್ಪತ್ರೆಗಳನ್ನು ತೆರೆದು ಈ ಕೃತ್ಯಕ್ಕೆ ಕೈ ಹಾಕಲಾಗುತ್ತಿದೆ. ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಬಿಗ್ ಪ್ಲಾನ್ ಮಾಡಿದ್ದು, ಭ್ರೂಣಹತ್ಯೆ ಪ್ರಕರಣದ ಸುಳಿವು ಕೊಟ್ಟವರಿಗೆ ಒಂದು ಲಕ್ಷ ರೂ ಬಹುಮಾನ ಘೋಷಿಸಿದೆ.

ಈ ಮೊದಲು ಭ್ರೂಣಹತ್ಯೆ ಪ್ರಕರಣದ ಸುಳಿವು ನೀಡಿದವರಿಗೆ ಕೇವಲ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೂ ರಾಜ್ಯದಲ್ಲಿ ಯಾರಿಗೂ ಕಾಣದಂತೆ ಯಥೇಚ್ಛವಾಗಿ ಭ್ರೂಣಲಿಂಗ ಹತ್ಯೆ ಪ್ರಕರಣಗಳು ನಡೆಯುತ್ತಲೇ ಇದ್ದವು.

ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಪ್ರಕರಣದ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದೆ. ರಾಷ್ಟ್ರೀಯ ಅಭಿಯಾನದಡಿ 50 ಸಾವಿರ ಹಾಗೂ ಆಯಾಯ ಜಿಲ್ಲೆಗಳಲ್ಲಿ ಸಂಗ್ರಹಿಸಿರುವ ಪಿಸಿ ಅಂಡ್ ಪಿಎನ್‌ಟಿಡಿ ಶುಲ್ಕದಿಂದ 50 ಸಾವಿರ ರೂ ನೀಡಲು ಮುಂದಾಗಿದೆ.

andolana

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

11 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

35 mins ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

47 mins ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

5 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

6 hours ago