ರಾಜ್ಯ

ಬಿಎಂಟಿಸಿ ಸಿಬ್ಬಂದಿ ಮುಷ್ಕರಕ್ಕೆ ಸರ್ಕಾರ ಬ್ರೇಕ್; 6 ತಿಂಗಳು ಪ್ರತಿಭಟನೆ ಮಾಡದಂತೆ ಅಧಿಸೂಚನೆ

ಬೆಂಗಳೂರು: ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಮುಷ್ಕರಕ್ಕೆ ಇಳಿದಿದ್ದ ಬಿಎಂಟಿಸಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.

ಕಳೆದ 3 ವರ್ಷಗಳಿಂದ ಸಾರಿಗೆ ಇಲಾಖೆ ವೇತನ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ಬಿಎಂಟಿಸಿ ಸಿಬ್ಬಂದಿ ಕಳೆದ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ವೇತನ ಬಾಕಿ ಉಳಿಸಿಕೊಂಡಿರುವ ಪರಿಣಾಮ ನಮಗೆ ಜೀವನ ನಡೆಸುವುದೇ ಬಲು ಕಷ್ಟ ಎಂದು ಬಿಎಂಟಿಸಿ ಸಿಬ್ಬಂದಿ ಸರ್ಕಾರದ ವಿರುದ್ಧ ಭಾರೀ ಅಸಮಾಧಾನ ಹೊರಹಾಕಿದ್ದರು.

ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವೇತನದ ಜೊತೆಗೆ ನಮಗೆ ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೂ ರಾಜ್ಯ ಸರ್ಕಾರ ಮಾತ್ರ ಬಿಎಂಟಿಸಿ ಸಿಬ್ಬಂದಿ ಮನವಿಗೆ ಕ್ಯಾರೇ ಎಂದಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಸಿಬ್ಬಂದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆಯಿಂದ ಎಚ್ಚೆತ್ತ ಸರ್ಕಾರ ಮುಂದಿನ 6 ತಿಂಗಳು ಯಾವುದೇ ಪ್ರತಿಭಟನೆ ಮಾಡುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ. ಈ ಮೂಲಕ ನೌಕರರ ಪ್ರತಿಭಟನೆ ತಡೆಯಲು ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನೌಕರರಿಗೆ ಭಾರೀ ನಿರಾಸೆ ಆಗಿದೆ ಎನ್ನಲಾಗುತ್ತಿದೆ.

andolana

Recent Posts

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

7 mins ago

ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…

26 mins ago

ದಕ್ಷಿಣ ಕಾಶಿಯ ಪಂಚ ಮಹಾರಥೋತ್ಸವಕ್ಕೆ ಭಾರಿ ಸಿದ್ಧತೆ

ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ  ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…

41 mins ago

ಆಕಾಶನನ್ನು ಬಾನಿನಲ್ಲಿ ಹಾರಾಡಲು ಕಲಿಸಿದ ಮೈಸೂರಿನ ವಾಕ್- ಶ್ರವಣ ಸಂಸ್ಥೆ

ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…

4 hours ago

ವೀರಗಾಸೆಯೇ ಜೀವವಾಗಿರುವ ಕಿರಾಳು ಮಹೇಶ್

ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…

4 hours ago

ಕಾಡ ನೋಡಹೋಗಿ ಲಂಟಾನ ಕಂಡು ಬಂದೆ

ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…

4 hours ago