ಬೆಂಗಳೂರು: ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಮುಷ್ಕರಕ್ಕೆ ಇಳಿದಿದ್ದ ಬಿಎಂಟಿಸಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.
ಕಳೆದ 3 ವರ್ಷಗಳಿಂದ ಸಾರಿಗೆ ಇಲಾಖೆ ವೇತನ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ಬಿಎಂಟಿಸಿ ಸಿಬ್ಬಂದಿ ಕಳೆದ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ವೇತನ ಬಾಕಿ ಉಳಿಸಿಕೊಂಡಿರುವ ಪರಿಣಾಮ ನಮಗೆ ಜೀವನ ನಡೆಸುವುದೇ ಬಲು ಕಷ್ಟ ಎಂದು ಬಿಎಂಟಿಸಿ ಸಿಬ್ಬಂದಿ ಸರ್ಕಾರದ ವಿರುದ್ಧ ಭಾರೀ ಅಸಮಾಧಾನ ಹೊರಹಾಕಿದ್ದರು.
ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವೇತನದ ಜೊತೆಗೆ ನಮಗೆ ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೂ ರಾಜ್ಯ ಸರ್ಕಾರ ಮಾತ್ರ ಬಿಎಂಟಿಸಿ ಸಿಬ್ಬಂದಿ ಮನವಿಗೆ ಕ್ಯಾರೇ ಎಂದಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಸಿಬ್ಬಂದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನೆಯಿಂದ ಎಚ್ಚೆತ್ತ ಸರ್ಕಾರ ಮುಂದಿನ 6 ತಿಂಗಳು ಯಾವುದೇ ಪ್ರತಿಭಟನೆ ಮಾಡುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ. ಈ ಮೂಲಕ ನೌಕರರ ಪ್ರತಿಭಟನೆ ತಡೆಯಲು ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನೌಕರರಿಗೆ ಭಾರೀ ನಿರಾಸೆ ಆಗಿದೆ ಎನ್ನಲಾಗುತ್ತಿದೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…