ರಾಜ್ಯ

ಬಿಎಂಟಿಸಿ ಸಿಬ್ಬಂದಿ ಮುಷ್ಕರಕ್ಕೆ ಸರ್ಕಾರ ಬ್ರೇಕ್; 6 ತಿಂಗಳು ಪ್ರತಿಭಟನೆ ಮಾಡದಂತೆ ಅಧಿಸೂಚನೆ

ಬೆಂಗಳೂರು: ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಮುಷ್ಕರಕ್ಕೆ ಇಳಿದಿದ್ದ ಬಿಎಂಟಿಸಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.

ಕಳೆದ 3 ವರ್ಷಗಳಿಂದ ಸಾರಿಗೆ ಇಲಾಖೆ ವೇತನ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ಬಿಎಂಟಿಸಿ ಸಿಬ್ಬಂದಿ ಕಳೆದ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ವೇತನ ಬಾಕಿ ಉಳಿಸಿಕೊಂಡಿರುವ ಪರಿಣಾಮ ನಮಗೆ ಜೀವನ ನಡೆಸುವುದೇ ಬಲು ಕಷ್ಟ ಎಂದು ಬಿಎಂಟಿಸಿ ಸಿಬ್ಬಂದಿ ಸರ್ಕಾರದ ವಿರುದ್ಧ ಭಾರೀ ಅಸಮಾಧಾನ ಹೊರಹಾಕಿದ್ದರು.

ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವೇತನದ ಜೊತೆಗೆ ನಮಗೆ ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೂ ರಾಜ್ಯ ಸರ್ಕಾರ ಮಾತ್ರ ಬಿಎಂಟಿಸಿ ಸಿಬ್ಬಂದಿ ಮನವಿಗೆ ಕ್ಯಾರೇ ಎಂದಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಸಿಬ್ಬಂದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆಯಿಂದ ಎಚ್ಚೆತ್ತ ಸರ್ಕಾರ ಮುಂದಿನ 6 ತಿಂಗಳು ಯಾವುದೇ ಪ್ರತಿಭಟನೆ ಮಾಡುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ. ಈ ಮೂಲಕ ನೌಕರರ ಪ್ರತಿಭಟನೆ ತಡೆಯಲು ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನೌಕರರಿಗೆ ಭಾರೀ ನಿರಾಸೆ ಆಗಿದೆ ಎನ್ನಲಾಗುತ್ತಿದೆ.

andolana

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

4 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

4 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

5 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

5 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

10 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

10 hours ago