ರಾಜ್ಯ

ವಿದ್ಯುತ್ ಕೃತಕ ಅಭಾವ ಸೃಷ್ಟಿಸಿ ಕಮಿಷನ್‍ ಹೊಡೆಯಲು ಮುಂದಾದ ಸರ್ಕಾರ: ಎಚ್‌ಡಿಕೆ

ಬೆಂಗಳೂರು : ವಿದ್ಯುತ್ ಉತ್ಪಾದನೆ ಮಾಡುವ ಸಾಮಥ್ರ್ಯ ಇದ್ದರೂ ರಾಜ್ಯ ಸರ್ಕಾರ ಕೃತಕ ವಿದ್ಯುತ್ ಅಭಾವ ಸೃಷ್ಟಿಸುವ ಮೂಲಕ ದುಬಾರಿ ದರದಲ್ಲಿ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮರ್ಪಕವಾಗಿ ವಿದ್ಯುತ್ ಉತ್ಪಾದನೆ ಮಾಡಿದರೆ ಉಳಿತಾಯವಾಗುವಷ್ಟು ವಿದ್ಯುತ್ ಉತ್ಪಾದಿಸಬಹುದು. ಆದರೆ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಲಹರಣ ಮಾಡಿದೆ. ಮಳೆ ಅಭಾವದಿಂದ ವಿದ್ಯುತ್ ಸಮಸ್ಯೆ ಉಂಟಾಗಿದೆ ಎಂದು ಹೇಳಿ ವಿದ್ಯುತ್ ಖರೀದಿ ಮಾಡಲು ಮುಂದಾಗುತ್ತಿದೆ ಎಂದು ಆರೋಪಿಸಿದರು.

1500 ಮೆಗಾವ್ಯಾಟ್ ವಿದ್ಯುತ್ ಖರೀದಿಸುವ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಸರ್ಕಾರವೇ ಹೇಳಿರುವ ಮಾಹಿತಿ ಪ್ರಕಾರ ಪ್ರತಿದಿನ 40 ಕೋಟಿ ವಿದ್ಯುತ್ ಖರೀದಿಗೆ ಬೇಕಾಗುತ್ತದೆ ಎಂದರು.

ರಾಜ್ಯದಲ್ಲಿ 32,912.52 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು. ಜಲವಿದ್ಯುತ್‍ನಲ್ಲಿ ಶೇ.50ರಷ್ಟು ಅಂದರೂ 1953.3 ಮೆ.ವ್ಯಾ ವಿದ್ಯುತ್ ಉತ್ಪಾದಿಸಬಹುದು. ಶಾಖೋತ್ಪನ್ನ ವಿದ್ಯುತ್ ಘಟಕಗಳಿಂದ 9947.56 ಮೆ.ವ್ಯಾ ಉತ್ಪಾದಿಸಬಹುದು. ಕೂಡ್ಲಗಿಯಲ್ಲಿ ಇನ್ನೆರು ಶಾಖೋತ್ಪನ್ನ ಘಟಕ ಆರಂಭಿಸಿದರೆ 4000 ಮೆ.ವ್ಯಾ ವಿದ್ಯುತ್ ಉತ್ಪಾದಿಸಬಹುದು. ಹೀಗೆ ರಾಜ್ಯದಲ್ಲಿ ಸರಾಸರಿ 16 ಸಾವಿರದಿಂದ 18 ಸಾವಿರ ಮೆ.ವ್ಯಾಟ್‍ವರೆಗೂ ವಿದ್ಯುತ್ ಉತ್ಪಾದಿಸಬಹುದು ಎಂದು ಹೇಳಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ದುಡ್ಡಿನ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ. ಆದರೂ ಸರ್ಕಾರ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ. ಸರ್ಕಾರದ ಲೋಪದೋಷಗಳನ್ನು ಹೇಳಿದ್ದು, ಯಾವ ರೀತಿ ಪರೀಕ್ಷಿಸಿಕೊಳ್ಳಬಹುದು ಎಂಬುದನ್ನು ಹೇಳಿದ್ದೇನೆ. ಸತ್ಯ ಹರಿಶ್ಚಂದ್ರ ಸರ್ಕಾರ ಐದು ತಿಂಗಳಲ್ಲಿ ಮಾಡಿದ್ದು ಸಾಕು, ಕಮಿಷನ್ ನಿಲ್ಲಿಸಿ ಜನರ ಸಮಸ್ಯೆ ಪರಿಹರಿಸಿ ಎಂದರು.

ಬರಗಾಲದಿಂದಾಗಿ ಆಹಾರಧಾನ್ಯ ಉತ್ಪಾದನೆ ಸಾಕಷ್ಟು ಕಡಿಮೆಯಾಗಲಿದ್ದು, ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಬಹುದು. ಅದಕ್ಕೆ ಯಾವ ಸಿದ್ದತೆ ಮಾಡಿಕೊಂಡಿದ್ದೀರಿ? ಎಂದು ಪ್ರಶ್ನಿಸಿದರು. ಮಾಹಿತಿ ಇಲ್ಲದೆ ಆರೋಪ ಮಾಡುತ್ತಿಲ್ಲ. 25-35 ವರ್ಷಗಳಿಂದ ಮಾಡಿಕೊಂಡು ಬಂದಿರುವುದು ಸಾಕು. ಇನ್ನಾದರೂ ಜನರ ಸಮಸ್ಯೆ ಬಗೆಹರಿಸಲು ಗಮನ ನೀಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರು ಹೇಳದೆ ಪ್ರಸ್ತಾಪಿಸಿದರು.

andolanait

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

4 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

12 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

12 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

17 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

17 hours ago