ಬೆಂಗಳೂರು: ರಾಜ್ಯದ ಜನರಲ್ಲಿ ಡೆಂಗ್ಯೂ ಬಗ್ಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಸರ್ಕಾರ ಜಾಗೃತಿ ಮೂಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಭಾನುವಾರ(ಜು.7) ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವರು ಎಲ್ಲ ಜಿಲ್ಲೆಗಳಿಗೆ ಹೋಗಿ ಜನರನ್ನು ಭೇಟಿ ಮಾಡಬೇಕು. ಕಾಂಗ್ರೆಸ್ನ ಎಲ್ಲ ಸಚಿವರು, ಶಾಸಕರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಬೇಕು ಎಂದು ಸಲಹೆ ನೀಡಿದರು.
ಉದ್ಯಾನ, ಸಾರ್ವಜನಿಕ ಸ್ಥಳ, ನೀರು ನಿಲ್ಲುವ ಸ್ಥಳ ಸೇರಿದಂತೆ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಿಸಬೇಕು ಎಂದರು.
ಡೆಂಗ್ಯೂ ಜೊತೆಗೆ ಝೀಕಾ, ಕಾಲರಾ ಕೂಡ ಕಂಡುಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಈ ಮೂರು ರೋಗಗಳಿಂದ ಜನರನ್ನು ಕಾಪಾಡಲು ಸರ್ಕಾರ ಹೆಚ್ಚು ಗಮನಹರಿಸಬೇಕು. ಬಿಬಿಎಂಪಿ ಆಯುಕ್ತರಿಗೇ ಸೊಳ್ಳೆ ಕಚ್ಚಿ ಡೆಂಗ್ಯೂ ಬಂದಿರುವುದಾಗ ಬಿಬಿಎಂಪಿ ಬೇರೆಯವರನ್ನು ಕಾಪಾಡಲು ಸಾಧ್ಯವಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸಾರ್ವಜನಿಕರರಲ್ಲಿ ಅರಿವು ಮೂಡಿಸಿ ಈ ಆತಂಕಗಳನ್ನೆಲ್ಲಾ ದೂರ ಮಾಡಿ ಎಂದರು.
ಸಭೆ ಮಾಡುವುದರಿಂದ ಏನೂ ಆಗುವುದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ಕೆಲಸ ಮಾಡಬೇಕು. ನಗರದಲ್ಲಿ ಬಿದ್ದಿರುವ ರಾಶಿ ಕಸವನ್ನು ವಿಲೇವಾರಿ ಮಾಡಲು ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಬೇಕು. ಹೆಚ್ಚು ಹಣ ನೀಡಬೇಕು ಎಂದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…