ಬೆಂಗಳೂರು: ರಾಜ್ಯದ ಜನರಲ್ಲಿ ಡೆಂಗ್ಯೂ ಬಗ್ಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಸರ್ಕಾರ ಜಾಗೃತಿ ಮೂಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಭಾನುವಾರ(ಜು.7) ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವರು ಎಲ್ಲ ಜಿಲ್ಲೆಗಳಿಗೆ ಹೋಗಿ ಜನರನ್ನು ಭೇಟಿ ಮಾಡಬೇಕು. ಕಾಂಗ್ರೆಸ್ನ ಎಲ್ಲ ಸಚಿವರು, ಶಾಸಕರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಬೇಕು ಎಂದು ಸಲಹೆ ನೀಡಿದರು.
ಉದ್ಯಾನ, ಸಾರ್ವಜನಿಕ ಸ್ಥಳ, ನೀರು ನಿಲ್ಲುವ ಸ್ಥಳ ಸೇರಿದಂತೆ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಿಸಬೇಕು ಎಂದರು.
ಡೆಂಗ್ಯೂ ಜೊತೆಗೆ ಝೀಕಾ, ಕಾಲರಾ ಕೂಡ ಕಂಡುಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಈ ಮೂರು ರೋಗಗಳಿಂದ ಜನರನ್ನು ಕಾಪಾಡಲು ಸರ್ಕಾರ ಹೆಚ್ಚು ಗಮನಹರಿಸಬೇಕು. ಬಿಬಿಎಂಪಿ ಆಯುಕ್ತರಿಗೇ ಸೊಳ್ಳೆ ಕಚ್ಚಿ ಡೆಂಗ್ಯೂ ಬಂದಿರುವುದಾಗ ಬಿಬಿಎಂಪಿ ಬೇರೆಯವರನ್ನು ಕಾಪಾಡಲು ಸಾಧ್ಯವಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸಾರ್ವಜನಿಕರರಲ್ಲಿ ಅರಿವು ಮೂಡಿಸಿ ಈ ಆತಂಕಗಳನ್ನೆಲ್ಲಾ ದೂರ ಮಾಡಿ ಎಂದರು.
ಸಭೆ ಮಾಡುವುದರಿಂದ ಏನೂ ಆಗುವುದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ಕೆಲಸ ಮಾಡಬೇಕು. ನಗರದಲ್ಲಿ ಬಿದ್ದಿರುವ ರಾಶಿ ಕಸವನ್ನು ವಿಲೇವಾರಿ ಮಾಡಲು ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಬೇಕು. ಹೆಚ್ಚು ಹಣ ನೀಡಬೇಕು ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…