ಬೆಂಗಳೂರು: ರಾಜ್ಯದ ಜನರಲ್ಲಿ ಡೆಂಗ್ಯೂ ಬಗ್ಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಸರ್ಕಾರ ಜಾಗೃತಿ ಮೂಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಭಾನುವಾರ(ಜು.7) ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವರು ಎಲ್ಲ ಜಿಲ್ಲೆಗಳಿಗೆ ಹೋಗಿ ಜನರನ್ನು ಭೇಟಿ ಮಾಡಬೇಕು. ಕಾಂಗ್ರೆಸ್ನ ಎಲ್ಲ ಸಚಿವರು, ಶಾಸಕರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಬೇಕು ಎಂದು ಸಲಹೆ ನೀಡಿದರು.
ಉದ್ಯಾನ, ಸಾರ್ವಜನಿಕ ಸ್ಥಳ, ನೀರು ನಿಲ್ಲುವ ಸ್ಥಳ ಸೇರಿದಂತೆ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಿಸಬೇಕು ಎಂದರು.
ಡೆಂಗ್ಯೂ ಜೊತೆಗೆ ಝೀಕಾ, ಕಾಲರಾ ಕೂಡ ಕಂಡುಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಈ ಮೂರು ರೋಗಗಳಿಂದ ಜನರನ್ನು ಕಾಪಾಡಲು ಸರ್ಕಾರ ಹೆಚ್ಚು ಗಮನಹರಿಸಬೇಕು. ಬಿಬಿಎಂಪಿ ಆಯುಕ್ತರಿಗೇ ಸೊಳ್ಳೆ ಕಚ್ಚಿ ಡೆಂಗ್ಯೂ ಬಂದಿರುವುದಾಗ ಬಿಬಿಎಂಪಿ ಬೇರೆಯವರನ್ನು ಕಾಪಾಡಲು ಸಾಧ್ಯವಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸಾರ್ವಜನಿಕರರಲ್ಲಿ ಅರಿವು ಮೂಡಿಸಿ ಈ ಆತಂಕಗಳನ್ನೆಲ್ಲಾ ದೂರ ಮಾಡಿ ಎಂದರು.
ಸಭೆ ಮಾಡುವುದರಿಂದ ಏನೂ ಆಗುವುದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ಕೆಲಸ ಮಾಡಬೇಕು. ನಗರದಲ್ಲಿ ಬಿದ್ದಿರುವ ರಾಶಿ ಕಸವನ್ನು ವಿಲೇವಾರಿ ಮಾಡಲು ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಬೇಕು. ಹೆಚ್ಚು ಹಣ ನೀಡಬೇಕು ಎಂದರು.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…