ರಾಜ್ಯ

ರೈತ ಸಾಂತ್ವನ ಯಾತ್ರೆ ವರದಿಯನ್ನು ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ: ಸಿಎಂ

ಬೆಂಗಳೂರು : ರಾಜ್ಯದ ಬರ ನಿರ್ವಹಣೆಗೆ ಹೆಚ್ಚಿನ ನೆರವು ಪಡೆದುಕೊಳ್ಳಲು ಕೇಂದ್ರದ ಬಳಿ ಸರ್ವ ಪಕ್ಷ ನಿಯೋಗ ಕರೆದುಕೊಂಡು ಹೋಗಲು ಸಹಕಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ.

ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ರೈತ ಸಾಂತ್ವನ ಯಾತ್ರೆ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ತಿಳಿಸಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದಿದ್ದಾರೆ.

ಹೊಸ ಬೆಳವಣಿಗೆಯಲ್ಲಿ ಕುಮಾರಸ್ವಾಮಿಯವರು ಅವರು ಈಗ ಕೇಂದ್ರದಲ್ಲಿ ಅಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದು
ಹೇಳಿದ್ದಾರೆ.

ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

4 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

4 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

6 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

6 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

6 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

14 hours ago