ರಾಜ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ಅತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.

ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು. ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ಎಂದರು.

ಇತ್ತೀಚೆಗೆ ಕೆಲವರು ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು ಬಿಂಬಿಸಲು ಪ್ರಾರಂಭಿಸಿದ್ದಾರೆ. ಮಹಾತ್ಮ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

10 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

10 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

10 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago