Mysore
30
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್‌‍ ಅಳವಡಿಕೆ: ಸಚಿವ ಎನ್.ಚಲುವರಾಯಸ್ವಾಮಿ

Minister N. Cheluvarayaswamy instructs action against officials harassing for bribes.

ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್‌‍ ಅಳವಡಿಕೆ ಹಾಗೂ ಸ್ಕ್ವಾಡ್‌ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್‌ನಲ್ಲಿ ತಿಳಿಸಿದರು.

ಸದಸ್ಯೆ ಹೇಮಲತಾ ನಾಯಕ್‌ ಅವರು ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರಿಗೆ ಪ್ರಶ್ನೆ ಕೇಳಿದ್ದರು. ಸಚಿವರ ಪರವಾಗಿ ಉತ್ತರಿಸಿದ ಚಲುವರಾಯಸ್ವಾಮಿಯವರು, ಅಕ್ರಮ ಮರಳುಗಾರಿಕೆ ತಡೆಗಟ್ಟುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.

ಎಲ್ಲೆಲ್ಲಿ ಮರಳುಗಾರಿಕೆ ನಡೆಯುತ್ತದೆಯೋ ಅಂತಹ ಕಡೆ ಜಿಪಿಎಸ್‌‍ ಅಳವಡಿಕೆ ಮತ್ತು ಈಗಿರುವ ಸ್ಕ್ವಾಡ್‌ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು. ಕಟ್ಟುನಿಟ್ಟಿನ ಕ್ರಮದ ನಡುವೆಯೂ ಕೆಲವು ಕಡೆ ಇಂತಹ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತವೆ ಎಂದರು.

ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳು, ತಹಸೀಲ್ದಾರ್‌ ಸೇರಿದಂತೆ ಮತ್ತಿತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗದಂತೆ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

Tags:
error: Content is protected !!