ರಾಜ್ಯ

ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್‌‍ ಅಳವಡಿಕೆ: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್‌‍ ಅಳವಡಿಕೆ ಹಾಗೂ ಸ್ಕ್ವಾಡ್‌ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್‌ನಲ್ಲಿ ತಿಳಿಸಿದರು.

ಸದಸ್ಯೆ ಹೇಮಲತಾ ನಾಯಕ್‌ ಅವರು ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರಿಗೆ ಪ್ರಶ್ನೆ ಕೇಳಿದ್ದರು. ಸಚಿವರ ಪರವಾಗಿ ಉತ್ತರಿಸಿದ ಚಲುವರಾಯಸ್ವಾಮಿಯವರು, ಅಕ್ರಮ ಮರಳುಗಾರಿಕೆ ತಡೆಗಟ್ಟುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.

ಎಲ್ಲೆಲ್ಲಿ ಮರಳುಗಾರಿಕೆ ನಡೆಯುತ್ತದೆಯೋ ಅಂತಹ ಕಡೆ ಜಿಪಿಎಸ್‌‍ ಅಳವಡಿಕೆ ಮತ್ತು ಈಗಿರುವ ಸ್ಕ್ವಾಡ್‌ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು. ಕಟ್ಟುನಿಟ್ಟಿನ ಕ್ರಮದ ನಡುವೆಯೂ ಕೆಲವು ಕಡೆ ಇಂತಹ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತವೆ ಎಂದರು.

ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳು, ತಹಸೀಲ್ದಾರ್‌ ಸೇರಿದಂತೆ ಮತ್ತಿತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗದಂತೆ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

8 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

8 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

8 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

8 hours ago