Minister N. Cheluvarayaswamy instructs action against officials harassing for bribes.
ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್ ಅಳವಡಿಕೆ ಹಾಗೂ ಸ್ಕ್ವಾಡ್ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್ನಲ್ಲಿ ತಿಳಿಸಿದರು.
ಸದಸ್ಯೆ ಹೇಮಲತಾ ನಾಯಕ್ ಅವರು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಪ್ರಶ್ನೆ ಕೇಳಿದ್ದರು. ಸಚಿವರ ಪರವಾಗಿ ಉತ್ತರಿಸಿದ ಚಲುವರಾಯಸ್ವಾಮಿಯವರು, ಅಕ್ರಮ ಮರಳುಗಾರಿಕೆ ತಡೆಗಟ್ಟುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.
ಎಲ್ಲೆಲ್ಲಿ ಮರಳುಗಾರಿಕೆ ನಡೆಯುತ್ತದೆಯೋ ಅಂತಹ ಕಡೆ ಜಿಪಿಎಸ್ ಅಳವಡಿಕೆ ಮತ್ತು ಈಗಿರುವ ಸ್ಕ್ವಾಡ್ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು. ಕಟ್ಟುನಿಟ್ಟಿನ ಕ್ರಮದ ನಡುವೆಯೂ ಕೆಲವು ಕಡೆ ಇಂತಹ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತವೆ ಎಂದರು.
ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳು, ತಹಸೀಲ್ದಾರ್ ಸೇರಿದಂತೆ ಮತ್ತಿತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗದಂತೆ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…