ರಾಜ್ಯ

ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್‌‍ ಅಳವಡಿಕೆ: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್‌‍ ಅಳವಡಿಕೆ ಹಾಗೂ ಸ್ಕ್ವಾಡ್‌ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್‌ನಲ್ಲಿ ತಿಳಿಸಿದರು.

ಸದಸ್ಯೆ ಹೇಮಲತಾ ನಾಯಕ್‌ ಅವರು ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರಿಗೆ ಪ್ರಶ್ನೆ ಕೇಳಿದ್ದರು. ಸಚಿವರ ಪರವಾಗಿ ಉತ್ತರಿಸಿದ ಚಲುವರಾಯಸ್ವಾಮಿಯವರು, ಅಕ್ರಮ ಮರಳುಗಾರಿಕೆ ತಡೆಗಟ್ಟುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.

ಎಲ್ಲೆಲ್ಲಿ ಮರಳುಗಾರಿಕೆ ನಡೆಯುತ್ತದೆಯೋ ಅಂತಹ ಕಡೆ ಜಿಪಿಎಸ್‌‍ ಅಳವಡಿಕೆ ಮತ್ತು ಈಗಿರುವ ಸ್ಕ್ವಾಡ್‌ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು. ಕಟ್ಟುನಿಟ್ಟಿನ ಕ್ರಮದ ನಡುವೆಯೂ ಕೆಲವು ಕಡೆ ಇಂತಹ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತವೆ ಎಂದರು.

ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳು, ತಹಸೀಲ್ದಾರ್‌ ಸೇರಿದಂತೆ ಮತ್ತಿತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗದಂತೆ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

3 mins ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

12 mins ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

15 mins ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

19 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

4 hours ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

15 hours ago