ರಾಜ್ಯ

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲಿದೆ. ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯ್ತಿಗಳಿಗೆ 2025ರ ಡಿಸೆಂಬರ್ ನಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿತ್ತು. ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ. ಆದುದರಿಂದ ನಿಗದಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ರಾಜ್ಯ ಚುನಾವಣಾ ಆಯೋಗ ಕೋರಿದೆ ಎಂದು ತಿಳಿಸಿದೆ.

ಪ್ರಸ್ತುತ ಬಹುತೇಕ ಗ್ರಾಮ ಪಂಚಾಯ್ತಿಗಳ ಅವಧಿಯು ಜನವರಿ-2026 ತಿಂಗಳನಿಂದ ಮಾರ್ಚ್-2026 ತಿಂಗಳವರೆಗೆ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅಡಿ ಗ್ರಾಮ ಪಂಚಾಯಿತಿಗಳಿಗೆ 2026-31ನೇ ಸಾಲಿನ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ನಡೆಸಲು ಬೇಕಾಗಿರುವ ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದೆ.

ಜಿಲ್ಲಾಧಿಕಾರಿಗಳು ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ, ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ಈ ನಡುವೆ ಗ್ರಾಮಪಂಚಾಯಿತಿಗಳ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಆರು ತಿಂಗಳುಗಳ ಕಾಲ ಈಗಿರುವ ಆಡಳಿತ ಸಮಿತಿಯನ್ನು ಮುಂದುವರಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿಗಳ ಸದಸ್ಯರ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ. ಈ ಹಿಂದೆ ಕೋವಿಡ್ ಕಾಲಾವಧಿಯಲ್ಲಿ ಅಧಿಕಾರ ಅವಧಿ ಮುಗಿದ ಗ್ರಾಮ ಪಂಚಾಯಿತಿಗಳ ಆಡಳಿತವನ್ನು ಆರು ತಿಂಗಳ ಕಾಲ ಮುಂದುವರಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಒತ್ತಾಯಿಸಿತ್ತು.

ಆಡಳಿತ ಅಧಿಕಾರಿ ನೇಮಕ ಮಾಡುವ ಆದೇಶ ಹಿಂದೆ ಪಡೆದು, ಈಗಿರುವ ಆಡಳಿತ ಸಮಿತಿಯನ್ನು ಮುಂದುವರೆಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ. ಹೀಗೆ ಹಲವು ಸಂದರ್ಭಗಳಲ್ಲಿ ಮಾಡಲಾಗಿದೆ. 90 ದಶಕದಲ್ಲಿ ಪಂಚಾಯಿತಿಗಳ ಅಧಿಕಾರ ಅವಧಿಯನ್ನು ವಿಸ್ತರಿಸಲಾಗಿತ್ತು. ಈಗಲೂ ಹಾಗೆಯೇ ಮಾಡಬಹುದು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿಗಳ ಸದಸ್ಯರ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

11 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago