ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಪೊಲೀಸ್ ಕಸ್ಟಡಿ ಸೇರಿದ್ದಾರೆ. ಇಡೀ ಕೊಲೆ ಪ್ರಕರಣದಲ್ಲಿ 17 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಸದ್ಯ ದರ್ಶನ್ ಸೇರಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
ಇತ್ತ ದರ್ಶನ್ ನಡತೆಯಿಂದ ಮನನೊಂದಿರುವ ದರ್ಶನ್ ತಾಯಿ ಮೀನಾ ತೂಗುದೀಪ್ ತೀವ್ರ ಆಘಾತಗೊಂಡಿದ್ದಾರೆ. ಕಳೆದರೆಡು ದಿನದಿಂದ ಮನೆಯೊಳಗೆ ಇರುವ ಮೀನಾ ತೂಗುದೀಪ್ ಯಾರೊಂದಿಗೂ ಮಾತನಾಡಲು ಬಯಸುತ್ತಿಲ್ಲ.
ಮೈಸೂರಿನ ಸಿದ್ದಾರ್ಥ ನಗರದ ಮನೆಯಲ್ಲಿರುವ ಮೀನಾ ತೂಗದೀಪ್ ಮಗನ ನೆನೆದು ಕಣ್ಣಿರಿಡುತ್ತಿದ್ದಾರೆ. ತೀವ್ರ ಆಘಾತದಿಂದ ಮನನೊಂದು ಮೂಲೆ ಹಿಡಿದಿರುವ ಅಜ್ಜಿಯನ್ನು ಸಂತೈಸಲು ಮೊಮ್ಮಗ ಚಂದನ್ ಮೈಸೂರಿನ ಅಜ್ಜಿ ಮನೆಗೆ ಬಂದಿದ್ದಾನೆ. ದರ್ಶನ್ ತಾಯಿ ಮೀನಾ ತೂಗುದೀಪ ಅವರ ಆರೈಕೆಗೆ ಆಗಮಿಸಿರುವ ದರ್ಶನ್ ಅಕ್ಕನ ಮಗ ಚಂದನ್ ಹಣ್ಣ, ಹಂಪು, ಊಟ, ತಿಂಡಿ ತಂದು ನೀಡಿ ಅಜ್ಜಿಯ ಆರೈಕೆಯಲ್ಲಿ ತೊಡಗಿದ್ದಾನೆ. ಸದ್ಯ ಅಜ್ಜಿಯ ಜೊತೆಯಲ್ಲಿ ಇರುವ ಚಂದನ್ ಅಜ್ಜಿಯನ್ನು ಸಮಾಧಾನಿಸುವ ಪ್ರಯತ್ನ ಮಾಡಿದ್ದಾನೆ.
ತಾಯಿಯೊಂದಿಗೂ ನಟ ದರ್ಶನ್ ಜಗಳ
ನಟ ದರ್ಶನ್ ಇತ್ತೀಚೆಗೆ ತಾಯಿ ಜೊತೆಗೂ ಜಗಳವಾಡಿಕೊಂಡಿದ್ದಾರೆ. ಜಗಳದ ಬಳಿಕ ತಾಯಿಯೊಂದಿಗೆ ಮಾತನಾಡುವುದನ್ನೇ ಬಿಟ್ಟಿದ್ದರು. ಜೊತೆಗೆ ಹಲವಾರು ದಿನಗಳಿಂದ ತಾಯಿ ಮನೆಗೂ ಭೇಟಿ ನೀಡಿಲ್ಲ. ದರ್ಶನ್ ಕೊಲೆ ಪ್ರಕರಣದ ಬಳಿಕ ತಾಯಿ ಮೀನಾ ತೂಗುದೀಪ್ ಮೌನಕ್ಕೆ ಜಾರಿದ್ದು, ಮಗ ದರ್ಶನ್ ಕುರಿತು ಮಾತನಾಡಲು ನಿರಾಕರಿಸಿದ್ದಾರೆ.
ಇನ್ನೊಬ್ಬ ಪುತ್ರ ದಿನಕರ್ ತೂಗುದೀಪ ಜೊತೆಗಿರುವ ಮೀನಾ ತಮ್ಮ ನೋವುಗಳನ್ನು ತೋಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಮನೆ ಒಳಗಡೆ ಇರುವ ದರ್ಶನ್ ತಾಯಿ, ಸಹೋದನ, ಮೊಮ್ಮಗ ಹಾಗೂ ಕುಟುಂಬಸ್ಥರು ಒಳಗಿನಿಂದ ಗೇಟ್ಗೆ ಲಾಕ್ ಮಾಡಿದ್ದಾರೆ.
ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…
ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ…
ಚಿಕ್ಕಮಗಳೂರು : ಬಾಬಾಬುಡನ್ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…
ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…