ರಾಜ್ಯ

ದರ್ಶನ್‌ ಪ್ರಕರಣದಿಂದ ಮನನೊಂದಿರುವ ಮೀನಾ ಸಂತೈಸಲು ಬಂದ ಮೊಮ್ಮಗ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅರೆಸ್ಟ್‌ ಆಗಿ ಪೊಲೀಸ್‌ ಕಸ್ಟಡಿ ಸೇರಿದ್ದಾರೆ. ಇಡೀ ಕೊಲೆ ಪ್ರಕರಣದಲ್ಲಿ 17 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಸದ್ಯ ದರ್ಶನ್‌ ಸೇರಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತ ದರ್ಶನ್‌ ನಡತೆಯಿಂದ ಮನನೊಂದಿರುವ ದರ್ಶನ್‌ ತಾಯಿ ಮೀನಾ ತೂಗುದೀಪ್‌ ತೀವ್ರ ಆಘಾತಗೊಂಡಿದ್ದಾರೆ. ಕಳೆದರೆಡು ದಿನದಿಂದ ಮನೆಯೊಳಗೆ ಇರುವ ಮೀನಾ ತೂಗುದೀಪ್‌ ಯಾರೊಂದಿಗೂ ಮಾತನಾಡಲು ಬಯಸುತ್ತಿಲ್ಲ.

ಮೈಸೂರಿನ ಸಿದ್ದಾರ್ಥ ನಗರದ ಮನೆಯಲ್ಲಿರುವ ಮೀನಾ ತೂಗದೀಪ್‌ ಮಗನ ನೆನೆದು ಕಣ್ಣಿರಿಡುತ್ತಿದ್ದಾರೆ. ತೀವ್ರ ಆಘಾತದಿಂದ ಮನನೊಂದು ಮೂಲೆ ಹಿಡಿದಿರುವ ಅಜ್ಜಿಯನ್ನು ಸಂತೈಸಲು ಮೊಮ್ಮಗ ಚಂದನ್‌ ಮೈಸೂರಿನ ಅಜ್ಜಿ ಮನೆಗೆ ಬಂದಿದ್ದಾನೆ. ದರ್ಶನ್‌ ತಾಯಿ ಮೀನಾ ತೂಗುದೀಪ ಅವರ ಆರೈಕೆಗೆ ಆಗಮಿಸಿರುವ ದರ್ಶನ್‌ ಅಕ್ಕನ ಮಗ ಚಂದನ್‌ ಹಣ್ಣ, ಹಂಪು, ಊಟ, ತಿಂಡಿ ತಂದು ನೀಡಿ ಅಜ್ಜಿಯ ಆರೈಕೆಯಲ್ಲಿ ತೊಡಗಿದ್ದಾನೆ. ಸದ್ಯ ಅಜ್ಜಿಯ ಜೊತೆಯಲ್ಲಿ ಇರುವ ಚಂದನ್‌ ಅಜ್ಜಿಯನ್ನು ಸಮಾಧಾನಿಸುವ ಪ್ರಯತ್ನ ಮಾಡಿದ್ದಾನೆ.

ತಾಯಿಯೊಂದಿಗೂ ನಟ ದರ್ಶನ್‌ ಜಗಳ
ನಟ ದರ್ಶನ್‌ ಇತ್ತೀಚೆಗೆ ತಾಯಿ ಜೊತೆಗೂ ಜಗಳವಾಡಿಕೊಂಡಿದ್ದಾರೆ. ಜಗಳದ ಬಳಿಕ ತಾಯಿಯೊಂದಿಗೆ ಮಾತನಾಡುವುದನ್ನೇ ಬಿಟ್ಟಿದ್ದರು. ಜೊತೆಗೆ ಹಲವಾರು ದಿನಗಳಿಂದ ತಾಯಿ ಮನೆಗೂ ಭೇಟಿ ನೀಡಿಲ್ಲ. ದರ್ಶನ್‌ ಕೊಲೆ ಪ್ರಕರಣದ ಬಳಿಕ ತಾಯಿ ಮೀನಾ ತೂಗುದೀಪ್‌ ಮೌನಕ್ಕೆ ಜಾರಿದ್ದು, ಮಗ ದರ್ಶನ್‌ ಕುರಿತು ಮಾತನಾಡಲು ನಿರಾಕರಿಸಿದ್ದಾರೆ.

ಇನ್ನೊಬ್ಬ ಪುತ್ರ ದಿನಕರ್‌ ತೂಗುದೀಪ ಜೊತೆಗಿರುವ ಮೀನಾ ತಮ್ಮ ನೋವುಗಳನ್ನು ತೋಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಮನೆ ಒಳಗಡೆ ಇರುವ ದರ್ಶನ್‌ ತಾಯಿ, ಸಹೋದನ, ಮೊಮ್ಮಗ ಹಾಗೂ ಕುಟುಂಬಸ್ಥರು ಒಳಗಿನಿಂದ ಗೇಟ್‌ಗೆ ಲಾಕ್‌ ಮಾಡಿದ್ದಾರೆ.

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

35 mins ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

4 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

7 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

11 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

11 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

11 hours ago