ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಪೊಲೀಸ್ ಕಸ್ಟಡಿ ಸೇರಿದ್ದಾರೆ. ಇಡೀ ಕೊಲೆ ಪ್ರಕರಣದಲ್ಲಿ 17 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಸದ್ಯ ದರ್ಶನ್ ಸೇರಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
ಇತ್ತ ದರ್ಶನ್ ನಡತೆಯಿಂದ ಮನನೊಂದಿರುವ ದರ್ಶನ್ ತಾಯಿ ಮೀನಾ ತೂಗುದೀಪ್ ತೀವ್ರ ಆಘಾತಗೊಂಡಿದ್ದಾರೆ. ಕಳೆದರೆಡು ದಿನದಿಂದ ಮನೆಯೊಳಗೆ ಇರುವ ಮೀನಾ ತೂಗುದೀಪ್ ಯಾರೊಂದಿಗೂ ಮಾತನಾಡಲು ಬಯಸುತ್ತಿಲ್ಲ.
ಮೈಸೂರಿನ ಸಿದ್ದಾರ್ಥ ನಗರದ ಮನೆಯಲ್ಲಿರುವ ಮೀನಾ ತೂಗದೀಪ್ ಮಗನ ನೆನೆದು ಕಣ್ಣಿರಿಡುತ್ತಿದ್ದಾರೆ. ತೀವ್ರ ಆಘಾತದಿಂದ ಮನನೊಂದು ಮೂಲೆ ಹಿಡಿದಿರುವ ಅಜ್ಜಿಯನ್ನು ಸಂತೈಸಲು ಮೊಮ್ಮಗ ಚಂದನ್ ಮೈಸೂರಿನ ಅಜ್ಜಿ ಮನೆಗೆ ಬಂದಿದ್ದಾನೆ. ದರ್ಶನ್ ತಾಯಿ ಮೀನಾ ತೂಗುದೀಪ ಅವರ ಆರೈಕೆಗೆ ಆಗಮಿಸಿರುವ ದರ್ಶನ್ ಅಕ್ಕನ ಮಗ ಚಂದನ್ ಹಣ್ಣ, ಹಂಪು, ಊಟ, ತಿಂಡಿ ತಂದು ನೀಡಿ ಅಜ್ಜಿಯ ಆರೈಕೆಯಲ್ಲಿ ತೊಡಗಿದ್ದಾನೆ. ಸದ್ಯ ಅಜ್ಜಿಯ ಜೊತೆಯಲ್ಲಿ ಇರುವ ಚಂದನ್ ಅಜ್ಜಿಯನ್ನು ಸಮಾಧಾನಿಸುವ ಪ್ರಯತ್ನ ಮಾಡಿದ್ದಾನೆ.
ತಾಯಿಯೊಂದಿಗೂ ನಟ ದರ್ಶನ್ ಜಗಳ
ನಟ ದರ್ಶನ್ ಇತ್ತೀಚೆಗೆ ತಾಯಿ ಜೊತೆಗೂ ಜಗಳವಾಡಿಕೊಂಡಿದ್ದಾರೆ. ಜಗಳದ ಬಳಿಕ ತಾಯಿಯೊಂದಿಗೆ ಮಾತನಾಡುವುದನ್ನೇ ಬಿಟ್ಟಿದ್ದರು. ಜೊತೆಗೆ ಹಲವಾರು ದಿನಗಳಿಂದ ತಾಯಿ ಮನೆಗೂ ಭೇಟಿ ನೀಡಿಲ್ಲ. ದರ್ಶನ್ ಕೊಲೆ ಪ್ರಕರಣದ ಬಳಿಕ ತಾಯಿ ಮೀನಾ ತೂಗುದೀಪ್ ಮೌನಕ್ಕೆ ಜಾರಿದ್ದು, ಮಗ ದರ್ಶನ್ ಕುರಿತು ಮಾತನಾಡಲು ನಿರಾಕರಿಸಿದ್ದಾರೆ.
ಇನ್ನೊಬ್ಬ ಪುತ್ರ ದಿನಕರ್ ತೂಗುದೀಪ ಜೊತೆಗಿರುವ ಮೀನಾ ತಮ್ಮ ನೋವುಗಳನ್ನು ತೋಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಮನೆ ಒಳಗಡೆ ಇರುವ ದರ್ಶನ್ ತಾಯಿ, ಸಹೋದನ, ಮೊಮ್ಮಗ ಹಾಗೂ ಕುಟುಂಬಸ್ಥರು ಒಳಗಿನಿಂದ ಗೇಟ್ಗೆ ಲಾಕ್ ಮಾಡಿದ್ದಾರೆ.
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…