ಬೆಂಗಳೂರು: ಕರ್ನಾಟಕದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ರಾಜ್ಯ ಹಜ್ ಸಮಿತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ, ಸಹಾಯಧನ ನೀಡುತ್ತಿಲ್ಲ. ಆದರೆ, ಸುಗಮ ಯಾತ್ರೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಸಾಯತ ಸ್ವಾಯತ್ತ ಸಂಸ್ಥೆಯಾಗಿರುವ ರಾಜ್ಯ ಹಜ್ ಸಮಿತಿಯಿಂದ ಯಾತ್ರೆ ಪ್ರಾರಂಭ ವಾಗುವ ಮುನ್ನ ಹಜ್ ಕ್ಯಾಂಪ್ ಆಯೋ ಜಿಸಲಾಗುತ್ತದೆ. ಈ ವೇಳೆ ಯಾತ್ರಿಗಳು ಉಳಿದುಕೊಳ್ಳಲು ಬೋರ್ಡಿಂಗ್ ಮತ್ತು ಲಾಡ್ಡಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತದೆ.
ಕಾಗದ ಪತ್ರ, ವಿದೇಶಿ ವಿನಿಮಯ ಹಂಚಿಕೆ ವ್ಯವಸ್ಥೆ, ವಿಮಾನ ನಿಲ್ದಾಣಕ್ಕೆ ತಲುಪಿಸುವುದು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಂಬಂಧ ಪಟ್ಟ ಇಲಾಖೆಗಳ ಸಹಕಾರದೊಂದಿಗೆಒದಗಿಸಲಾಗುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ.
ಜನಸಂಖ್ಯೆ ಆಧಾರದ ಮೇಲೆ ಎಷ್ಟುಯಾತ್ರಿಕರನ್ನು ಹಜ್ ಯಾತ್ರೆಗೆ ಕಳುಹಿಸ ಬೇಕು ಎಂಬುದನ್ನು ಮುಂಬೈ ನಲ್ಲಿರುವ ಹಜ್ ಸಮಿತಿ ನಿರ್ಧರಿಸುತ್ತದೆ. ಈ ಸಮಿತಿಯೊಂದಿಗೆ ರಾಜ್ಯ ಹಜ್ ಸಮಿತಿ ಸಂಯೋಜನೆ ಮಾಡುತ್ತದೆ. ಅರೇಬಿಯಾದಲ್ಲಿ ಕರ್ನಾಟಕದಿಂದ ತೆರಳುವ ಯಾತ್ರಿಕರ ಯೋಗಕ್ಷೇಮಕ್ಕೆ ಸ್ವಯಂ ಸೇವಕರನ್ನು ನಿಯೋಜಿಸಲಾಗುತ್ತದೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…