ಬೆಂಗಳೂರು: ಕರ್ನಾಟಕದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ರಾಜ್ಯ ಹಜ್ ಸಮಿತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ, ಸಹಾಯಧನ ನೀಡುತ್ತಿಲ್ಲ. ಆದರೆ, ಸುಗಮ ಯಾತ್ರೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಸಾಯತ ಸ್ವಾಯತ್ತ ಸಂಸ್ಥೆಯಾಗಿರುವ ರಾಜ್ಯ ಹಜ್ ಸಮಿತಿಯಿಂದ ಯಾತ್ರೆ ಪ್ರಾರಂಭ ವಾಗುವ ಮುನ್ನ ಹಜ್ ಕ್ಯಾಂಪ್ ಆಯೋ ಜಿಸಲಾಗುತ್ತದೆ. ಈ ವೇಳೆ ಯಾತ್ರಿಗಳು ಉಳಿದುಕೊಳ್ಳಲು ಬೋರ್ಡಿಂಗ್ ಮತ್ತು ಲಾಡ್ಡಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತದೆ.
ಕಾಗದ ಪತ್ರ, ವಿದೇಶಿ ವಿನಿಮಯ ಹಂಚಿಕೆ ವ್ಯವಸ್ಥೆ, ವಿಮಾನ ನಿಲ್ದಾಣಕ್ಕೆ ತಲುಪಿಸುವುದು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಂಬಂಧ ಪಟ್ಟ ಇಲಾಖೆಗಳ ಸಹಕಾರದೊಂದಿಗೆಒದಗಿಸಲಾಗುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ.
ಜನಸಂಖ್ಯೆ ಆಧಾರದ ಮೇಲೆ ಎಷ್ಟುಯಾತ್ರಿಕರನ್ನು ಹಜ್ ಯಾತ್ರೆಗೆ ಕಳುಹಿಸ ಬೇಕು ಎಂಬುದನ್ನು ಮುಂಬೈ ನಲ್ಲಿರುವ ಹಜ್ ಸಮಿತಿ ನಿರ್ಧರಿಸುತ್ತದೆ. ಈ ಸಮಿತಿಯೊಂದಿಗೆ ರಾಜ್ಯ ಹಜ್ ಸಮಿತಿ ಸಂಯೋಜನೆ ಮಾಡುತ್ತದೆ. ಅರೇಬಿಯಾದಲ್ಲಿ ಕರ್ನಾಟಕದಿಂದ ತೆರಳುವ ಯಾತ್ರಿಕರ ಯೋಗಕ್ಷೇಮಕ್ಕೆ ಸ್ವಯಂ ಸೇವಕರನ್ನು ನಿಯೋಜಿಸಲಾಗುತ್ತದೆ.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…