ಬೆಂಗಳೂರು: ಕರ್ನಾಟಕದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ರಾಜ್ಯ ಹಜ್ ಸಮಿತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ, ಸಹಾಯಧನ ನೀಡುತ್ತಿಲ್ಲ. ಆದರೆ, ಸುಗಮ ಯಾತ್ರೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಸಾಯತ ಸ್ವಾಯತ್ತ ಸಂಸ್ಥೆಯಾಗಿರುವ ರಾಜ್ಯ ಹಜ್ ಸಮಿತಿಯಿಂದ ಯಾತ್ರೆ ಪ್ರಾರಂಭ ವಾಗುವ ಮುನ್ನ ಹಜ್ ಕ್ಯಾಂಪ್ ಆಯೋ ಜಿಸಲಾಗುತ್ತದೆ. ಈ ವೇಳೆ ಯಾತ್ರಿಗಳು ಉಳಿದುಕೊಳ್ಳಲು ಬೋರ್ಡಿಂಗ್ ಮತ್ತು ಲಾಡ್ಡಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತದೆ.
ಕಾಗದ ಪತ್ರ, ವಿದೇಶಿ ವಿನಿಮಯ ಹಂಚಿಕೆ ವ್ಯವಸ್ಥೆ, ವಿಮಾನ ನಿಲ್ದಾಣಕ್ಕೆ ತಲುಪಿಸುವುದು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಂಬಂಧ ಪಟ್ಟ ಇಲಾಖೆಗಳ ಸಹಕಾರದೊಂದಿಗೆಒದಗಿಸಲಾಗುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ.
ಜನಸಂಖ್ಯೆ ಆಧಾರದ ಮೇಲೆ ಎಷ್ಟುಯಾತ್ರಿಕರನ್ನು ಹಜ್ ಯಾತ್ರೆಗೆ ಕಳುಹಿಸ ಬೇಕು ಎಂಬುದನ್ನು ಮುಂಬೈ ನಲ್ಲಿರುವ ಹಜ್ ಸಮಿತಿ ನಿರ್ಧರಿಸುತ್ತದೆ. ಈ ಸಮಿತಿಯೊಂದಿಗೆ ರಾಜ್ಯ ಹಜ್ ಸಮಿತಿ ಸಂಯೋಜನೆ ಮಾಡುತ್ತದೆ. ಅರೇಬಿಯಾದಲ್ಲಿ ಕರ್ನಾಟಕದಿಂದ ತೆರಳುವ ಯಾತ್ರಿಕರ ಯೋಗಕ್ಷೇಮಕ್ಕೆ ಸ್ವಯಂ ಸೇವಕರನ್ನು ನಿಯೋಜಿಸಲಾಗುತ್ತದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…