ರಾಜ್ಯ

ಹಜ್ ಯಾತ್ರಿಕರಿಗೆ ಅನುದಾನ, ಸಹಾಯಧನ ನೀಡುತ್ತಿಲ್ಲ : ರಾಜ್ಯ ಸರ್ಕಾರ ಸ್ಪಷ್ಟನೆ!

ಬೆಂಗಳೂರು: ಕರ್ನಾಟಕದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ರಾಜ್ಯ ಹಜ್ ಸಮಿತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ, ಸಹಾಯಧನ ನೀಡುತ್ತಿಲ್ಲ. ಆದರೆ, ಸುಗಮ ಯಾತ್ರೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಸಾಯತ ಸ್ವಾಯತ್ತ ಸಂಸ್ಥೆಯಾಗಿರುವ ರಾಜ್ಯ ಹಜ್ ಸಮಿತಿಯಿಂದ ಯಾತ್ರೆ ಪ್ರಾರಂಭ ವಾಗುವ ಮುನ್ನ ಹಜ್ ಕ್ಯಾಂಪ್ ಆಯೋ ಜಿಸಲಾಗುತ್ತದೆ. ಈ ವೇಳೆ ಯಾತ್ರಿಗಳು ಉಳಿದುಕೊಳ್ಳಲು ಬೋರ್ಡಿಂಗ್ ಮತ್ತು ಲಾಡ್ಡಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತದೆ.

ಕಾಗದ ಪತ್ರ, ವಿದೇಶಿ ವಿನಿಮಯ ಹಂಚಿಕೆ ವ್ಯವಸ್ಥೆ, ವಿಮಾನ ನಿಲ್ದಾಣಕ್ಕೆ ತಲುಪಿಸುವುದು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಂಬಂಧ ಪಟ್ಟ ಇಲಾಖೆಗಳ ಸಹಕಾರದೊಂದಿಗೆಒದಗಿಸಲಾಗುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ.

ಜನಸಂಖ್ಯೆ ಆಧಾರದ ಮೇಲೆ ಎಷ್ಟುಯಾತ್ರಿಕರನ್ನು ಹಜ್‌ ಯಾತ್ರೆಗೆ ಕಳುಹಿಸ ಬೇಕು ಎಂಬುದನ್ನು ಮುಂಬೈ ನಲ್ಲಿರುವ ಹಜ್ ಸಮಿತಿ ನಿರ್ಧರಿಸುತ್ತದೆ. ಈ ಸಮಿತಿಯೊಂದಿಗೆ ರಾಜ್ಯ ಹಜ್ ಸಮಿತಿ ಸಂಯೋಜನೆ ಮಾಡುತ್ತದೆ. ಅರೇಬಿಯಾದಲ್ಲಿ ಕರ್ನಾಟಕದಿಂದ ತೆರಳುವ ಯಾತ್ರಿಕರ ಯೋಗಕ್ಷೇಮಕ್ಕೆ ಸ್ವಯಂ ಸೇವಕರನ್ನು ನಿಯೋಜಿಸಲಾಗುತ್ತದೆ.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

2 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

2 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

3 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

8 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

11 hours ago