ಬೆಂಗಳೂರು: ನಮ್ಮ ಪಕ್ಷದಿಂದ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಅನುದಾನ ಕಡಿಮೆಯಾಗಿದೆಯೇ ಹೊರತು ಅನುದಾನವೇ ಸಿಕ್ಕಿಲ್ಲ ಎನ್ನುವುದು ತಪ್ಪು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಕ್ರಮಗಳು ಸಂಪೂರ್ಣ ನಿಂತುಹೋಗಿವೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕಡಿಮೆ ಸಿಕ್ಕಿದೆ ಎಂದರೆ ಅದನ್ನು ನಾನು ಅಂಗೀಕರಿಸುತ್ತೇನೆ. ಆದರೆ ಅನುದಾನವೇ ಸಿಕ್ಕಿಲ್ಲ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.
ಇನ್ನು ಕೆಲವು ಕ್ಷೇತ್ರಗಳಲ್ಲಿ ಹಿಂದಿನ ಅವಧಿಗಳಿಗೆ ಹೋಲಿಕೆ ಮಾಡಿ ನೋಡಿದರೆ ಕಡಿಮೆ ಪ್ರಮಾಣದಲ್ಲಿ ಅನುದಾನ ದೊರೆತಿದೆ ಎಂಬಂತೆ ಭಾಸವಾಗುತ್ತಿದ್ದು, ಅನುದಾನವೇ ಸಿಕ್ಕಿಲ್ಲವೆಂದು ಹೇಳುವುದು ತಪ್ಪು. ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ವಿನಿಯೋಗಿಸಿರುವುದರಿಂದ ಅನುದಾನ ಕಡಿಮೆಯಾಗಿದೆ. ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನವೂ ಅಭಿವೃದ್ಧಿ ಕೆಲಸ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಟಕ್ಕರ್ ಕೊಟ್ಟರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…