ರಾಜ್ಯ

ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಅನುದಾನ ನೀಡಿರುವುದು ಸುಳ್ಳು: ರಾಮಲಿಂಗಾ

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಏನು ಕೊಡುಗೆ ನೀಡಿಲ್ಲ. ಅವರು ಅನುದಾನ ನೀಡಿರುವುದು ಶುದ್ಧ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಇಂದು (ಮಾ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ 1,600 ಕೋಟಿ ರೂ. ಮಾತ್ರ ನೀಡಲಾಗಿತ್ತು. ಆದರೆ, ನಿಜೆಪಿ ಶಾಸಕರಿದ್ದ ಕ್ಷೇತ್ರಗಳಿಗೆ 5 ಸಾವಿರ ಕೋಟಿ ರೂ. ಅನುದಾನ ಹಂಚಿಕೆಯಾಗಿತ್ತು ಎಂದರು.

ಬಿಜೆಪಿ ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಮುನಿರತ್ನ ಹಾಗೂ ಭೈರತಿ ಬಸವರಾಜು ಅವರ ಕ್ಷೇತ್ರಗಳಿಗೆ ಹಿಂದಿನ ಬಿಜೆಪಿ ಸರ್ಕಾರ ಅತಿ ಹೆಚ್ಚು ಅನುದಾನ ನೀಡಿತ್ತು ಎಂದು ಅಂಕಿ ಅಂಶಗಳನ್ನು ನೀಡಿದರು.

ಬಿಬಿಎಂಪಿ ಚುನಾವಣೆ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ. ಗ್ರೇಟರ್‌ ಬೆಂಗಳೂರು ಮಸೂದೆ ವಿಧಾನಮಂಡಲದಲ್ಲಿ ಅನುಮೋದನೆ ಆಗಲಿದೆ. ಅದರ ಪ್ರಕಾರ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದರು.

 

ಆಂದೋಲನ ಡೆಸ್ಕ್

Recent Posts

ಓಂಕಾರ್ ವಲಯದಲ್ಲಿ ಹತೋಟಿಗೆ ಬಾರದ ಒಂಟಿ ಸಲಗದ ಉಪಟಳ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…

1 min ago

ಬಂಡೀಪುರದಲ್ಲಿ ಸಫಾರಿಗರಿಗೆ ಹುಲಿ ದರ್ಶನ: ಜಿಂಕೆ ಬೇಟೆಯಾಡಿದ ಸೀಳು ನಾಯಿ

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…

11 mins ago

ಚಾರಣದಲ್ಲಿ ಮಾರ್ಗಸೂಚಿ ಕಟ್ಟುನಿಟ್ಟು ಅನುಸರಣೆಗೆ ಕ್ರಮ ಅಗತ್ಯ

ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…

1 hour ago

ಐತಿಹಾಸಿಕ ಸಂಸತ್ ಅಧಿವೇಶನಕ್ಕೆ ದಿನಗಣನೆ!

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ  ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್, ಬಿಜೆಪಿ ಪಾಳೆಯದಲ್ಲಿ ಮಿಶ್ರಭಾವನೆ ಹುಟ್ಟು ಹಾಕಿದ ಉಪಚುನಾವಣೆ

ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…

1 hour ago

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

4 hours ago