ರಾಜ್ಯ

ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಅನುದಾನ ನೀಡಿರುವುದು ಸುಳ್ಳು: ರಾಮಲಿಂಗಾ

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಏನು ಕೊಡುಗೆ ನೀಡಿಲ್ಲ. ಅವರು ಅನುದಾನ ನೀಡಿರುವುದು ಶುದ್ಧ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಇಂದು (ಮಾ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ 1,600 ಕೋಟಿ ರೂ. ಮಾತ್ರ ನೀಡಲಾಗಿತ್ತು. ಆದರೆ, ನಿಜೆಪಿ ಶಾಸಕರಿದ್ದ ಕ್ಷೇತ್ರಗಳಿಗೆ 5 ಸಾವಿರ ಕೋಟಿ ರೂ. ಅನುದಾನ ಹಂಚಿಕೆಯಾಗಿತ್ತು ಎಂದರು.

ಬಿಜೆಪಿ ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಮುನಿರತ್ನ ಹಾಗೂ ಭೈರತಿ ಬಸವರಾಜು ಅವರ ಕ್ಷೇತ್ರಗಳಿಗೆ ಹಿಂದಿನ ಬಿಜೆಪಿ ಸರ್ಕಾರ ಅತಿ ಹೆಚ್ಚು ಅನುದಾನ ನೀಡಿತ್ತು ಎಂದು ಅಂಕಿ ಅಂಶಗಳನ್ನು ನೀಡಿದರು.

ಬಿಬಿಎಂಪಿ ಚುನಾವಣೆ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ. ಗ್ರೇಟರ್‌ ಬೆಂಗಳೂರು ಮಸೂದೆ ವಿಧಾನಮಂಡಲದಲ್ಲಿ ಅನುಮೋದನೆ ಆಗಲಿದೆ. ಅದರ ಪ್ರಕಾರ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago